ಬ್ರೇಕಿಂಗ್ ನ್ಯೂಸ್
17-12-20 01:59 pm Bangalore Correspondent ಕ್ರೈಂ
ಬೆಂಗಳೂರು, ಡಿ.17: ಆರೆಸ್ಸೆಸ್ ನಾಯಕನ ಸೋಗಿನಲ್ಲಿ ಒಬ್ಬಾತ ರಾಜ್ಯ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸ್ತೀನಿ ಎಂದು ಹೇಳ್ಕೊಂಡು ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಯುವರಾಜ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬವರಿಗೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ, ಒಂದು ಕೋಟಿ ರೂಪಾಯಿ ಪಡೆದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಆತನ ಮನೆಗೆ ದಾಳಿ ನಡೆಸಿದಾಗ, 91 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ.


ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಾಗೂ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಈತ ಹತ್ತಾರು ಮಂದಿಗೆ ಮೋಸ ಮಾಡಿದ್ದಾನೆ. ಅಷ್ಟೇ ಅಲ್ಲ, ಅದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡಿದ್ದಾನೆ. ಯುವರಾಜನ ಬಂಧನ ಆಗುತ್ತಿದ್ದಂತೆ ಪೊಲೀಸರಿಗೆ ಹಲವು ಕಡೆಗಳಿಂದ ಮೋಸ ಹೋಗಿರುವ ಮಂದಿ ದೂರು ಹೇಳಿಕೊಂಡಿದ್ದಾರೆ. ಎಲ್ಲರೂ ಬಂದು ದೂರು ದಾಖಲು ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳೇ ಹೀಗೆ ಮೋಸ ಹೋದವರು ಎನ್ನುವುದು ವಿಶೇಷ.



ರಾಜ್ಯಪಾಲರ ಹುದ್ದೆ, ನಿಗಮ ಮಂಡಳಿ ಹುದ್ದೆಗೆ ಇಂತಿಷ್ಟು ಅಂತ ಲೆಕ್ಕ ಹೇಳಿಕೊಂಡಿದ್ದ ಯುವರಾಜ, ಅದಕ್ಕಾಗಿ ಇಂತಿಷ್ಟು ಅಡ್ವಾನ್ಸ್ ಹಣ ಪಡೆಯುತ್ತಿದ್ದ. ರಾಜಧಾನಿಯಲ್ಲಿ ಹಲವಾರು ಮಂದಿಗೆ ಹಣ ಪಡೆದು ಮೋಸ ಮಾಡಿದ್ದಾನೆ. ರಾಜ್ಯಪಾಲರನ್ನಾಗಿ ಮಾಡುತ್ತೇನೆಂದು ವ್ಯಕ್ತಿಯೊಬ್ಬರಿಂದ ಹತ್ತು ಕೋಟಿ ಪಡೆದಿದ್ದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಹೀಗೂ ಮೋಸ ಹೋಗುತ್ತಾರೆಯೇ ಎಂದು ಪೊಲೀಸರೇ ಹುಬ್ಬೇರಿಸಿದ್ದಾರೆ.
ಇನ್ನೂ ಹಲವರು ಈತನಿಂದ ಮೋಸ ಹೋಗಿರುವ ಸಾಧ್ಯತೆಯಿದ್ದು ನಗದು ಹಣ ಕೊಟ್ಟಿರುವುದು ಮತ್ತು ಮರ್ಯಾದೆಗೆ ಅಂಜಿ ದೂರು ಕೊಡಲು ಮುಂದೆ ಬರುತ್ತಿಲ್ಲ. ಬಿಜೆಪಿ ಸರಕಾರದಲ್ಲಿ ಆರೆಸ್ಸೆಸ್ ನಾಯಕರು ಕೈಯಾಡಿಸಿದ್ರೆ ಎಲ್ಲವೂ ಆಗುತ್ತೆ ಅನ್ನುವ ಭರವಸೆಯಿಂದ ಸಾಕಷ್ಟು ಹಣವಂತರೇ ಮೋಸಕ್ಕೆ ಒಳಗಾಗಿದ್ದಾರೆ, ಶ್ರೀಮಂತರು ತನ್ನನ್ನು ನಂಬುವಂತೆ ಮಾಡಲು ತಾನು ಸಿಎಂ ಯಡಿಯೂರಪ್ಪರಿಗೆ ಆಪ್ತ ಎನ್ನುವಂತೆ ಬಿಂಬಿಸಿ ಸಿಎಂ ಜೊತೆಗಿರುವ ಫೋಟೋ ತೋರಿಸಿಕೊಂಡು ಯಾಮಾರಿಸುತ್ತಿದ್ದ.
Fraud in the name of Giving Governor post one person has arrested by CCB police in Bangalore. The arrested has been identified as Yuvarj.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm