ಬ್ರೇಕಿಂಗ್ ನ್ಯೂಸ್
17-12-20 01:59 pm Bangalore Correspondent ಕ್ರೈಂ
ಬೆಂಗಳೂರು, ಡಿ.17: ಆರೆಸ್ಸೆಸ್ ನಾಯಕನ ಸೋಗಿನಲ್ಲಿ ಒಬ್ಬಾತ ರಾಜ್ಯ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸ್ತೀನಿ ಎಂದು ಹೇಳ್ಕೊಂಡು ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಯುವರಾಜ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬವರಿಗೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ, ಒಂದು ಕೋಟಿ ರೂಪಾಯಿ ಪಡೆದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಆತನ ಮನೆಗೆ ದಾಳಿ ನಡೆಸಿದಾಗ, 91 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ.


ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಾಗೂ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಈತ ಹತ್ತಾರು ಮಂದಿಗೆ ಮೋಸ ಮಾಡಿದ್ದಾನೆ. ಅಷ್ಟೇ ಅಲ್ಲ, ಅದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡಿದ್ದಾನೆ. ಯುವರಾಜನ ಬಂಧನ ಆಗುತ್ತಿದ್ದಂತೆ ಪೊಲೀಸರಿಗೆ ಹಲವು ಕಡೆಗಳಿಂದ ಮೋಸ ಹೋಗಿರುವ ಮಂದಿ ದೂರು ಹೇಳಿಕೊಂಡಿದ್ದಾರೆ. ಎಲ್ಲರೂ ಬಂದು ದೂರು ದಾಖಲು ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳೇ ಹೀಗೆ ಮೋಸ ಹೋದವರು ಎನ್ನುವುದು ವಿಶೇಷ.



ರಾಜ್ಯಪಾಲರ ಹುದ್ದೆ, ನಿಗಮ ಮಂಡಳಿ ಹುದ್ದೆಗೆ ಇಂತಿಷ್ಟು ಅಂತ ಲೆಕ್ಕ ಹೇಳಿಕೊಂಡಿದ್ದ ಯುವರಾಜ, ಅದಕ್ಕಾಗಿ ಇಂತಿಷ್ಟು ಅಡ್ವಾನ್ಸ್ ಹಣ ಪಡೆಯುತ್ತಿದ್ದ. ರಾಜಧಾನಿಯಲ್ಲಿ ಹಲವಾರು ಮಂದಿಗೆ ಹಣ ಪಡೆದು ಮೋಸ ಮಾಡಿದ್ದಾನೆ. ರಾಜ್ಯಪಾಲರನ್ನಾಗಿ ಮಾಡುತ್ತೇನೆಂದು ವ್ಯಕ್ತಿಯೊಬ್ಬರಿಂದ ಹತ್ತು ಕೋಟಿ ಪಡೆದಿದ್ದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಹೀಗೂ ಮೋಸ ಹೋಗುತ್ತಾರೆಯೇ ಎಂದು ಪೊಲೀಸರೇ ಹುಬ್ಬೇರಿಸಿದ್ದಾರೆ.
ಇನ್ನೂ ಹಲವರು ಈತನಿಂದ ಮೋಸ ಹೋಗಿರುವ ಸಾಧ್ಯತೆಯಿದ್ದು ನಗದು ಹಣ ಕೊಟ್ಟಿರುವುದು ಮತ್ತು ಮರ್ಯಾದೆಗೆ ಅಂಜಿ ದೂರು ಕೊಡಲು ಮುಂದೆ ಬರುತ್ತಿಲ್ಲ. ಬಿಜೆಪಿ ಸರಕಾರದಲ್ಲಿ ಆರೆಸ್ಸೆಸ್ ನಾಯಕರು ಕೈಯಾಡಿಸಿದ್ರೆ ಎಲ್ಲವೂ ಆಗುತ್ತೆ ಅನ್ನುವ ಭರವಸೆಯಿಂದ ಸಾಕಷ್ಟು ಹಣವಂತರೇ ಮೋಸಕ್ಕೆ ಒಳಗಾಗಿದ್ದಾರೆ, ಶ್ರೀಮಂತರು ತನ್ನನ್ನು ನಂಬುವಂತೆ ಮಾಡಲು ತಾನು ಸಿಎಂ ಯಡಿಯೂರಪ್ಪರಿಗೆ ಆಪ್ತ ಎನ್ನುವಂತೆ ಬಿಂಬಿಸಿ ಸಿಎಂ ಜೊತೆಗಿರುವ ಫೋಟೋ ತೋರಿಸಿಕೊಂಡು ಯಾಮಾರಿಸುತ್ತಿದ್ದ.
Fraud in the name of Giving Governor post one person has arrested by CCB police in Bangalore. The arrested has been identified as Yuvarj.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am