ಬ್ರೇಕಿಂಗ್ ನ್ಯೂಸ್
17-12-20 01:59 pm Bangalore Correspondent ಕ್ರೈಂ
ಬೆಂಗಳೂರು, ಡಿ.17: ಆರೆಸ್ಸೆಸ್ ನಾಯಕನ ಸೋಗಿನಲ್ಲಿ ಒಬ್ಬಾತ ರಾಜ್ಯ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸ್ತೀನಿ ಎಂದು ಹೇಳ್ಕೊಂಡು ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಯುವರಾಜ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬವರಿಗೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ, ಒಂದು ಕೋಟಿ ರೂಪಾಯಿ ಪಡೆದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಆತನ ಮನೆಗೆ ದಾಳಿ ನಡೆಸಿದಾಗ, 91 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ.


ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಾಗೂ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಈತ ಹತ್ತಾರು ಮಂದಿಗೆ ಮೋಸ ಮಾಡಿದ್ದಾನೆ. ಅಷ್ಟೇ ಅಲ್ಲ, ಅದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡಿದ್ದಾನೆ. ಯುವರಾಜನ ಬಂಧನ ಆಗುತ್ತಿದ್ದಂತೆ ಪೊಲೀಸರಿಗೆ ಹಲವು ಕಡೆಗಳಿಂದ ಮೋಸ ಹೋಗಿರುವ ಮಂದಿ ದೂರು ಹೇಳಿಕೊಂಡಿದ್ದಾರೆ. ಎಲ್ಲರೂ ಬಂದು ದೂರು ದಾಖಲು ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳೇ ಹೀಗೆ ಮೋಸ ಹೋದವರು ಎನ್ನುವುದು ವಿಶೇಷ.



ರಾಜ್ಯಪಾಲರ ಹುದ್ದೆ, ನಿಗಮ ಮಂಡಳಿ ಹುದ್ದೆಗೆ ಇಂತಿಷ್ಟು ಅಂತ ಲೆಕ್ಕ ಹೇಳಿಕೊಂಡಿದ್ದ ಯುವರಾಜ, ಅದಕ್ಕಾಗಿ ಇಂತಿಷ್ಟು ಅಡ್ವಾನ್ಸ್ ಹಣ ಪಡೆಯುತ್ತಿದ್ದ. ರಾಜಧಾನಿಯಲ್ಲಿ ಹಲವಾರು ಮಂದಿಗೆ ಹಣ ಪಡೆದು ಮೋಸ ಮಾಡಿದ್ದಾನೆ. ರಾಜ್ಯಪಾಲರನ್ನಾಗಿ ಮಾಡುತ್ತೇನೆಂದು ವ್ಯಕ್ತಿಯೊಬ್ಬರಿಂದ ಹತ್ತು ಕೋಟಿ ಪಡೆದಿದ್ದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಹೀಗೂ ಮೋಸ ಹೋಗುತ್ತಾರೆಯೇ ಎಂದು ಪೊಲೀಸರೇ ಹುಬ್ಬೇರಿಸಿದ್ದಾರೆ.
ಇನ್ನೂ ಹಲವರು ಈತನಿಂದ ಮೋಸ ಹೋಗಿರುವ ಸಾಧ್ಯತೆಯಿದ್ದು ನಗದು ಹಣ ಕೊಟ್ಟಿರುವುದು ಮತ್ತು ಮರ್ಯಾದೆಗೆ ಅಂಜಿ ದೂರು ಕೊಡಲು ಮುಂದೆ ಬರುತ್ತಿಲ್ಲ. ಬಿಜೆಪಿ ಸರಕಾರದಲ್ಲಿ ಆರೆಸ್ಸೆಸ್ ನಾಯಕರು ಕೈಯಾಡಿಸಿದ್ರೆ ಎಲ್ಲವೂ ಆಗುತ್ತೆ ಅನ್ನುವ ಭರವಸೆಯಿಂದ ಸಾಕಷ್ಟು ಹಣವಂತರೇ ಮೋಸಕ್ಕೆ ಒಳಗಾಗಿದ್ದಾರೆ, ಶ್ರೀಮಂತರು ತನ್ನನ್ನು ನಂಬುವಂತೆ ಮಾಡಲು ತಾನು ಸಿಎಂ ಯಡಿಯೂರಪ್ಪರಿಗೆ ಆಪ್ತ ಎನ್ನುವಂತೆ ಬಿಂಬಿಸಿ ಸಿಎಂ ಜೊತೆಗಿರುವ ಫೋಟೋ ತೋರಿಸಿಕೊಂಡು ಯಾಮಾರಿಸುತ್ತಿದ್ದ.
Fraud in the name of Giving Governor post one person has arrested by CCB police in Bangalore. The arrested has been identified as Yuvarj.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm