ಬ್ರೇಕಿಂಗ್ ನ್ಯೂಸ್
01-03-25 02:40 pm Mangalore Correspondent ಕ್ರೈಂ
ಮಂಗಳೂರು, ಮಾ.1 : ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗುವ ಬೈಕ್, ದ್ವಿಚಕ್ರ ವಾಹನಗಳನ್ನು ಕದ್ದು ರಹಸ್ಯವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂಲದ, ಮೂಡುಬಿದ್ರೆಯಲ್ಲಿ ಗ್ಯಾರೇಜ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಮುಖ ಆರೋಪಿ ಮಣಿಕಂಠ ಗೌಡ ಕೆ. (24) ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ ಗೌಡ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳನಾಗಿದ್ದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಕಳವು ಮತ್ತು ಮಾರಾಟ ಜಾಲ ನಡೆಸುತ್ತಿದ್ದನು. ಮೂಡುಬಿದ್ರೆಯಲ್ಲಿ ಕಳವು ಮಾಡಿ ಬಚ್ಚಿಡಲಾಗಿದ್ದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.






ಸದ್ಯಕ್ಕೆ ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಡೆದ ಬೈಕ್ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗಿರುವ ಬೈಕ್ ಗಳನ್ನು ಕದಿಯುತ್ತಿದ್ದ. ಸ್ವತಃ ಮೆಕ್ಯಾನಿಕ್ ಆಗಿದ್ದರಿಂದ ವಾಹನಗಳ ಇಗ್ನಿಷನ್ ಸಾಕೆಟ್ ಪ್ಲಗ್ಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಬೈಕ್ ಕಳ್ಳತನ ಮಾಡಿಕೊಂಡು ಹೋಗುತಿದ್ದ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಗಳಿಗೆ ರೀಸೇಲ್ ವ್ಯಾಲ್ಯೂ ಹೆಚ್ಚಿರುವುದರಿಂದ ಅದನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿದ್ದ.
ಮಣಿಕಂಠ ಸೊರಬ ಮೂಲದ ನಿವಾಸಿಯಾಗಿದ್ದರೂ, ತನ್ನ ಕುಟುಂಬದೊಂದಿಗೆ ಮೂಡಬಿದ್ರೆಯಲ್ಲಿ ವಾಸ್ತವವ್ಯವಿದ್ದ. ಕದ್ದ ಬೈಕ್ ಗಳನ್ನು ರೀಸೇಲ್ ಮಾಡುವುದಕ್ಕಾಗಿ ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ. ಈತನಿಂದ ಕಾರ್ಕಳದ ಸತೀಶ್ ಬಂಗೇರ, ಮೂಡಬಿದ್ರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬವರು ಬೈಕ್ ಗಳನ್ನು ಖರೀದಿಸಿ ರೀ ಸೇಲ್ ಮಾಡುತ್ತಿದ್ದರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದು ಅವರನ್ನೂ ಬಂಧಿಸಿದ್ದಾರೆ.
ಸೂಕ್ತ ದಾಖಲೆಗಳಿಲ್ಲದ ವಾಹನಗಳನ್ನು ಪಡೆದು ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಅವರ ಮೇಲೆ ಕೇಸು ದಾಖಲಿಸಲಾಗಿದೆ. ಮಂಗಳೂರು ಬಂದರು, ಪಾಂಡೇಶ್ವರ, ಬಜ್ಪೆ, ಮುಲ್ಕಿ, ಉಳ್ಳಾಲ, ಕಂಕನಾಡಿ ನಗರ ಠಾಣೆ ವ್ಯಾಪ್ತಿಯ 15 ಪ್ರಕರಣ ಹಾಗೂ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಐದು ಪ್ರಕರಣ ಸೇರಿ 20 ಕೇಸುಗಳನ್ನು ಪತ್ತೆ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣ ಬೆನ್ನತ್ತಿದ ಪೊಲೀಸರು ಕುಖ್ಯಾತ ಚಾಲಾಕಿ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ.
Mangalore Kankandy town police nab natouries bike gang Thieves, 20 stolen bikes recovered. The police have attested four including one from Moodbidri. Kankandy town inspector T D Nagraj and team have succeeded in arresting four bike robbers.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:08 pm
HK News Desk
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am