ಬ್ರೇಕಿಂಗ್ ನ್ಯೂಸ್

Trump Vs Zelenskyy, Talk fight: ಶ್ವೇತ ಭವನದಲ್ಲಿ ಟ್ರಂಪ್ – ಉಕ್ರೇನ್ ಅಧ್ಯಕ್ಷರ ಟಾಕ್ ವಾರ್ ; ಜನರ ಜೀವದ ಜೊತೆ ಚೆಲ್ಲಾವಾಡುತ್ತಿದ್ದೀರಿ, 3ನೇ ಮಹಾಯುದ್ಧಕ್ಕೆ ಹಾತೊರೆಯುತ್ತಿದ್ದೀರಿ, ನಿಮಗೆ ಶಾಂತಿ ಬೇಕಿಲ್ಲ, ಅಮೆರಿಕ ನೆರವಿಲ್ಲದಿದ್ದರೆ ಎರಡೇ ವಾರಕ್ಕೆ ಯುದ್ಧ ಅಂತ್ಯ..!    |    Bike Robbery, Mangalore Police, Crime, TD Nagraj: ಜಾತ್ರೆ, ಕಂಬಳದಲ್ಲಿ ನಿಲ್ಲಿಸಿ ಹೋಗುತ್ತಿದ್ದ ಬೈಕ್ ಗಳೇ ಟಾರ್ಗೆಟ್ ; ಸ್ಪ್ಲೆಂಡರ್ ಕದ್ದು ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಪೊಲೀಸರು, ಮೂಡುಬಿದ್ರೆಯಲ್ಲಿ 20ಕ್ಕೂ ಹೆಚ್ಚು ಕದ್ದ ಬೈಕ್ ಪತ್ತೆ, ನಾಲ್ವರ ಸೆರೆ     |    Farangipete Protest, Diganth, Missing, Mangalore: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ; ಫರಂಗಿಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್, ಇನ್ನೆರಡು ದಿನದಲ್ಲಿ ಬಾಲಕ ಪತ್ತೆಯಾಗದಿದ್ದರೆ ತೀವ್ರ ಪ್ರತಿಭಟನೆ ಎಚ್ಚರಿಕೆ, ಪತ್ತೆಗೆ ಸರ್ವ ಪ್ರಯತ್ನ ಎಂದ ಎಸ್ಪಿ     |   

Bike Robbery, Mangalore Police, Crime, TD Nagraj: ಜಾತ್ರೆ, ಕಂಬಳದಲ್ಲಿ ನಿಲ್ಲಿಸಿ ಹೋಗುತ್ತಿದ್ದ ಬೈಕ್ ಗಳೇ ಟಾರ್ಗೆಟ್ ; ಸ್ಪ್ಲೆಂಡರ್ ಕದ್ದು ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಪೊಲೀಸರು, ಮೂಡುಬಿದ್ರೆಯಲ್ಲಿ 20ಕ್ಕೂ ಹೆಚ್ಚು ಕದ್ದ ಬೈಕ್ ಪತ್ತೆ, ನಾಲ್ವರ ಸೆರೆ 

01-03-25 02:40 pm       Mangalore Correspondent   ಕ್ರೈಂ

ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗುವ ಬೈಕ್, ದ್ವಿಚಕ್ರ ವಾಹನಗಳನ್ನು ಕದ್ದು ರಹಸ್ಯವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂಲದ, ಮೂಡುಬಿದ್ರೆಯಲ್ಲಿ ಗ್ಯಾರೇಜ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಮುಖ ಆರೋಪಿ ಮಣಿಕಂಠ ಗೌಡ ಕೆ. (24) ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ‌

ಮಂಗಳೂರು, ಮಾ.1 :  ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗುವ ಬೈಕ್, ದ್ವಿಚಕ್ರ ವಾಹನಗಳನ್ನು ಕದ್ದು ರಹಸ್ಯವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂಲದ, ಮೂಡುಬಿದ್ರೆಯಲ್ಲಿ ಗ್ಯಾರೇಜ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಮುಖ ಆರೋಪಿ ಮಣಿಕಂಠ ಗೌಡ ಕೆ. (24) ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ‌

ಮಣಿಕಂಠ ಗೌಡ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳನಾಗಿದ್ದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಕಳವು ಮತ್ತು ಮಾರಾಟ ಜಾಲ ನಡೆಸುತ್ತಿದ್ದನು.‌ ಮೂಡುಬಿದ್ರೆಯಲ್ಲಿ ಕಳವು ಮಾಡಿ ಬಚ್ಚಿಡಲಾಗಿದ್ದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸದ್ಯಕ್ಕೆ ಮಂಗಳೂರು‌ ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಡೆದ ಬೈಕ್ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗಿರುವ ಬೈಕ್ ಗಳನ್ನು ಕದಿಯುತ್ತಿದ್ದ. ಸ್ವತಃ ಮೆಕ್ಯಾನಿಕ್ ಆಗಿದ್ದರಿಂದ ವಾಹನಗಳ ಇಗ್ನಿಷನ್ ಸಾಕೆಟ್ ಪ್ಲಗ್ಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಬೈಕ್ ಕಳ್ಳತನ ಮಾಡಿಕೊಂಡು ಹೋಗುತಿದ್ದ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಗಳಿಗೆ ರೀಸೇಲ್ ವ್ಯಾಲ್ಯೂ ಹೆಚ್ಚಿರುವುದರಿಂದ ಅದನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿದ್ದ. 

ಮಣಿಕಂಠ ಸೊರಬ ಮೂಲದ ನಿವಾಸಿಯಾಗಿದ್ದರೂ, ತನ್ನ ಕುಟುಂಬದೊಂದಿಗೆ ಮೂಡಬಿದ್ರೆಯಲ್ಲಿ ವಾಸ್ತವವ್ಯವಿದ್ದ. ಕದ್ದ ಬೈಕ್ ಗಳನ್ನು ರೀಸೇಲ್ ಮಾಡುವುದಕ್ಕಾಗಿ ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ. ಈತನಿಂದ ಕಾರ್ಕಳದ ಸತೀಶ್ ಬಂಗೇರ, ಮೂಡಬಿದ್ರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬವರು ಬೈಕ್ ಗಳನ್ನು ಖರೀದಿಸಿ ರೀ ಸೇಲ್ ಮಾಡುತ್ತಿದ್ದರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದು ಅವರನ್ನೂ ಬಂಧಿಸಿದ್ದಾರೆ. 

ಸೂಕ್ತ ದಾಖಲೆಗಳಿಲ್ಲದ ವಾಹನಗಳನ್ನು ಪಡೆದು ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಅವರ ಮೇಲೆ ಕೇಸು ದಾಖಲಿಸಲಾಗಿದೆ. ಮಂಗಳೂರು ಬಂದರು, ಪಾಂಡೇಶ್ವರ, ಬಜ್ಪೆ, ಮುಲ್ಕಿ, ಉಳ್ಳಾಲ, ಕಂಕನಾಡಿ ನಗರ ಠಾಣೆ ವ್ಯಾಪ್ತಿಯ 15 ಪ್ರಕರಣ ಹಾಗೂ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಐದು ಪ್ರಕರಣ ಸೇರಿ 20 ಕೇಸುಗಳನ್ನು ಪತ್ತೆ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣ ಬೆನ್ನತ್ತಿದ ಪೊಲೀಸರು ಕುಖ್ಯಾತ ಚಾಲಾಕಿ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ.

Mangalore Kankandy town police nab natouries bike gang Thieves, 20 stolen bikes recovered. The police have attested four including one from Moodbidri. Kankandy town inspector T D Nagraj and team have succeeded in arresting four bike robbers.