ಬ್ರೇಕಿಂಗ್ ನ್ಯೂಸ್
03-03-25 01:51 pm HK News Desk ಕ್ರೈಂ
ಚಂಡೀಗಢ, ಮಾ.3: ಹರ್ಯಾಣದಲ್ಲಿ ಕಾಂಗ್ರೆಸಿನಲ್ಲಿ ಗುರುತಿಸಿಕೊಂಡಿದ್ದ ಯುವ ಕಾರ್ಯಕರ್ತೆಯನ್ನು ಬರ್ಬರವಾಗಿ ಕೊಲೆಗೈದು ಸೂಟ್ ಕೇಸ್ ನಲ್ಲಿ ಮುಚ್ಚಿಟ್ಟು ಎಸೆದು ಹೋಗಿರುವ ಘಟನೆ ನಡೆದಿದ್ದು, ಭಾರೀ ಸಂಚಲನ ಎಬ್ಬಿಸಿದೆ. ರೋಹ್ಟಕ್ ನಿವಾಸಿ ಹಿಮಾನಿ ನರ್ವಾಲ್ (22) ಕೊಲೆಯಾದ ಯುವತಿಯಾಗಿದ್ದು, ಕಾಂಗ್ರೆಸ್ ನಾಯಕರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆಕೆಯ ತಾಯಿ ಆರೋಪಿಸಿದ್ದಾರೆ.
ರಾಹುಲ್ ಗಾಂಥಿ ಮತ್ತು ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪೇಂದರ್ ಹೂಡಾ ಕುಟುಂಬದ ಜೊತೆಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಹಿಮಾನಿ ನರ್ವಾಲ್, ರಾಹುಲ್ ಜೊತೆಗಿನ ಭಾರತ್ ಯಾತ್ರಾ ಪಾದಯಾತ್ರೆಯಲ್ಲಿ ತೊಡಗಿಸಿಕೊಂಡಿದ್ದಳು. ಹರ್ಯಾಣದಿಂದ ಶ್ರೀನಗರದ ವರೆಗೂ ಕಾಲ್ನಡಿಗೆ ಯಾತ್ರೆಯಲ್ಲಿ ರಾಹುಲ್ ಜೊತೆಗೆ ಭಾಗವಹಿಸಿದ್ದಳು. ಆ ಸಂದರ್ಭದಲ್ಲಿ ಕೊಠಡಿ ಹಂಚಿಕೆ ಸಂಬಂಧ ರಾಜ್ಯದ ಕೆಲವು ನಾಯಕರ ಜೊತೆಗೆ ಮನಸ್ತಾಪ ಆಗಿತ್ತು. ರಾಹುಲ್ ಮತ್ತು ಪಕ್ಷದ ಹಿರಿಯ ನಾಯಕ ಭೂಪೇಂದರ್ ಸಿಂಗ್ ಹೂಡಾ ಜೊತೆ ಉತ್ತಮ ಒಡನಾಟವಿತ್ತು. ಇದನ್ನು ಸಹಿಸದೆ ಕೆಲವರು ಕೊಲೆ ಮಾಡಿದ್ದಾರೆ ಎಂದು ಹಿಮಾನಿ ಅವರ ತಾಯಿ ಸವಿತಾ ಆರೋಪ ಮಾಡಿದ್ದಾರೆ.



ಹರ್ಯಾಣದಲ್ಲಿ ಬಿಜೆಪಿ ಆಡಳಿತವಿದ್ದು, ಕಾಂಗ್ರೆಸ್ ಕಾರ್ಯಕರ್ತೆಯ ಹತ್ಯೆ ಮತ್ತು ಪಕ್ಷದ ನಾಯಕರ ವಿರುದ್ಧವೇ ತಾಯಿ ಆರೋಪ ಮಾಡಿರುವುದು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕೃತ್ಯವನ್ನು ಯಾರು ಮಾಡಿದ್ದರೂ ಅವರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸುತ್ತೇವೆ ಎಂದು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ. ಶುಕ್ರವಾರ ಪಕ್ಷದ ಕಾರ್ಯಕ್ರಮದಲ್ಲಿ ಬಿಝಿಯಾಗಿದ್ದ ಹಿಮಾನಿ ನರ್ವಾಲ್, ಶನಿವಾರ ರೋಹ್ಟಕ್ ನಗರದ ಬಸ್ ನಿಲ್ದಾಣದ ಬಳಿ ಎಸೆದು ಹೋಗಿದ್ದ ಸೂಟ್ ಕೇಸ್ ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಕುತ್ತಿಗೆಯನ್ನು ಆಕೆಯ ಶಾಲಿನಿಂದಲೇ ಬಿಗಿದು ಕೊಲೆ ಮಾಡಲಾಗಿತ್ತು. ಪೊಲೀಸರು ಘಟನೆ ಸಂಬಂಧಿಸಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಫೆ.27ರಂದು ನಾನು ಆಕೆಯ ಜೊತೆಗೆ ಮಾತನಾಡಿದ್ದೆ. ಮರುದಿನ ಪಕ್ಷದ ಕಾರ್ಯಕ್ರಮಕ್ಕಾಗಿ ಬಿಝಿಯಾಗಿದ್ದೇನೆ ಎಂದು ಹೇಳಿದ್ದಳು. ಪಕ್ಷದಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿದ್ದಳು. ಮರುದಿನ ಆಕೆಯ ಫೋನ್ ಸ್ವಿಚ್ ಆಫ್ ಆಗಿತ್ತು. ನನ್ನ ಮಗಳ ಏಳಿಗೆ ಸಹಿಸದೆ ಪಕ್ಷದವರೇ ಯಾರೋ ಕೊಲೆ ಮಾಡಿದ್ದಾರೆ. ನನ್ನ ಮಗಳಿಗೆ ನ್ಯಾಯ ಸಿಗಬೇಕು, ಆರೋಪಿಗಳನ್ನು ಬಂಧನ ಮಾಡೋವರೆಗೂ ಶವ ಸುಡುವುದಿಲ್ಲ ಎಂದು ಹೇಳಿ ಭಾನುವಾರ ತಾಯಿ ಸವಿತಾ ಪ್ರತಿಭಟನೆ ಮಾಡಿದ್ದಾರೆ.
A woman's body was found in a suitcase in Haryana’s Rohtak on Saturday, and the Congress party identified the victim as a party worker and have demanded a “high-level probe into the murder”. The body was found in a large blue suitcase near the Sampla bus stand on Friday, following which Sampla police were alerted.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm