ಬ್ರೇಕಿಂಗ್ ನ್ಯೂಸ್
05-03-25 10:24 am HK News Desk ಕ್ರೈಂ
ಬೆಳಗಾವಿ, ಮಾ 05: ಪ್ರೇಯಸಿಯನ್ನು ಹತ್ಯೆ ಮಾಡಿ ಪ್ರೇಮಿಯೂ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಹಾಪುರದ ನಾಥಪೈ ಸರ್ಕಲ್ನಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪ್ರಶಾಂತ ಕುಂಡೇಕರ್ (29), ಐಶ್ವರ್ಯ ಲೋಹಾರ ಮೃತ ದುರ್ದೈವಿಗಳು. ಇಬ್ಬರ ಕುಟುಂಬಗಳಲ್ಲೂ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಚಿಕ್ಕಮ್ಮನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಪ್ರೇಯಸಿ ಐಶ್ವರ್ಯಗೆ ಮೊದಲು ಕತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ.
ಕಳೆದ ಒಂದು ವರ್ಷದಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ವೃತ್ತಿಯಲ್ಲಿ ಪ್ರಶಾಂತ ಕುಂಡೇಕರ್ ಪೇಂಟರ್ ಆಗಿದ್ದ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಇದೊಂದು ಬಹಳ ದುಃಖಕರ ಘಟನೆ. ಐದು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಹುಡುಗ ಮತ್ತು ಹುಡುಗಿಯ ನಡುವೆ ಪ್ರೇಮವಿತ್ತು. ಹುಡುಗ ಮದುವೆಗೆ ಒತ್ತಾಯಿಸುತ್ತಿದ್ದ. ಚೆನ್ನಾಗಿ ಕೆಲಸ ಮಾಡಿ ಸಂಬಳ ಜಾಸ್ತಿ ಮಾಡಿಕೊ ಎಂದು ಹುಡುಗಿ ತಾಯಿ ಹೇಳಿದ್ದರು. ಆದರೂ, ಹುಡುಗ ಹುಡುಗಿಗೆ ಮದುವೆ ಮಾಡಿಕೊಳ್ಳೋಣ ಎಂದು ಒತ್ತಾಯಿಸಿದ್ದಾನೆ. ಇಂದು ಬರುವಾಗ ಜೊತೆಗೆ ವಿಷದ ಬಾಟಲಿ ಕೂಡ ತಂದಿದ್ದ. ಮೊದಲು ಹುಡುಗ ಚಾಕುವಿನಿಂದ ಇರಿದಿದ್ದಾನೆ. ನಂತರ ಕುತ್ತಿಗೆ ಕುಯ್ದುಕೊಂಡು ಹುಡುಗನೂ ಸಹ ಮೃತಪಟ್ಟಿದ್ದಾನೆ ಎಂದು ಅವರು ಘಟನೆಯ ಮಾಹಿತಿ ನೀಡಿದರು.
ಹುಡುಗ ಪೇಂಟಿಂಗ್ ಮಾಡ್ತಿದ್ದ. ಕೊಲೆ ನಡೆದಿರುವುದು ಹುಡುಗಿಯ ಚಿಕ್ಕಮ್ಮನ ಮನೆಯಲ್ಲಿ. ಕೊಲೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಹುಡುಗ ಯಳ್ಳೂರು ಗ್ರಾಮದವನು. ಒಂದೂವರೇ ವರ್ಷದಿಂದ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದರು. ಹುಡುಗಿಯೂ ಸಹ ಮೇಜರ್ ಇದ್ದಾರೆ, ತನಿಖೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
In a shocking turn of events, a young couple's love story has ended in tragedy as Prashanth, 29, allegedly killed his girlfriend Aishwarya, 21, before taking his own life. The incident occurred earlier today, sending shockwaves through the local community.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:08 pm
HK News Desk
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am