ಬ್ರೇಕಿಂಗ್ ನ್ಯೂಸ್
08-03-25 10:44 pm HK News Desk ಕ್ರೈಂ
ಕೊಪ್ಪಳ, ಮಾ.8 : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತಡರಾತ್ರಿಯ ವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯೊಬ್ಬರ ಮೇಲೆ ಮೂರು ಜನರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅಲ್ಲದೆ ಈ ವೇಳೆ ಸ್ಥಳದಲ್ಲಿದ್ದ ಇತರೆ ಮೂವರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು. ಈ ಪೈಕಿ ನಾಪತ್ತೆಯಾಗಿದ್ದ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿದೆ.

ಈ ಮಧ್ಯೆ, ಇಬ್ಬರು ಮಹಿಳಾ ಸಂತ್ರಸ್ತರು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಗಂಗಾವತಿ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಬಂಧಿತರು. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಪೆಟ್ರೋಲ್ ಗೆ ಹಣ ಕೊಡಲಿಲ್ಲವೆಂದು ಅತ್ಯಾಚಾರ
ದುಷ್ಕರ್ಮಿಗಳು ಮದ್ಯ ಸೇವಿಸಿದ ನಂತರ ತಮ್ಮ ದ್ವಿಚಕ್ರ ವಾಹನದಲ್ಲಿ ಸುತ್ತುವ ಅಭ್ಯಾಸವನ್ನು ಹೊಂದಿದ್ದರು. ಇದೇ ರೀತಿ ಗುರುವಾರ ಸವಾರಿಯಲ್ಲಿದ್ದಾಗ ಪ್ರವಾಸಿಗರ ಗುಂಪನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೊದಲು ಅವರು ಪೆಟ್ರೋಲ್ ಬಂಕ್ ಕುರಿತು ವಿಚಾರಿಸಿದ್ದು, ಈ ವೇಳೆ ಪೆಟ್ರೋಲ್ ಗೆ ಹಣ ನೀಡು ಎಂದು ಕೇಳಿದ್ದಾರೆ. ಪ್ರವಾಸಿಗರು ಹಣ ನೀಡಲಿಲ್ಲ ಎಂದು ಜಗಳ ತೆಗೆದಿದ್ದಾರೆ. ಬಳಿಕ ಅಲ್ಲಿದ್ದ ಪುರುಷರನ್ನು ಹೊಡೆದು ಅವರನ್ನು ನಾಲೆಗೆ ತಳ್ಳಿದ್ದಾರೆ. ನಂತರ ಇಸ್ರೇಲಿ ಮೂಲದ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಲೆಗೆ ಬಿದ್ದ ಮೂವರು ಪುರುಷರ ಪೈಕಿ ಇಬ್ಬರು ಈಜಿ ಜೀವ ಉಳಿಸಿಕೊಂಡಿದ್ದರೆ, ಓರ್ವ ಒಡಿಶಾ ಮೂಲದ ಪ್ರವಾಸಿಗರು ಈಜಲು ಬಾರದೇ ಸಾವನ್ನಪ್ಪಿದ್ದಾನೆ.
Koppal police arrested two men on Saturday in connection with the gang-rape of a 27-year-old Israeli tourist and a 29-year-old homestay operator near Sanapur Lake, close to the Unesco World Heritage Site of Hampi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm