ಬ್ರೇಕಿಂಗ್ ನ್ಯೂಸ್
10-03-25 10:48 pm HK News Desk ಕ್ರೈಂ
ಪಾಟ್ನಾ, ಮಾ.10 : ಬಿಹಾರದ ಭೋಜ್ಪುರ ಜಿಲ್ಲೆಯ ಗೋಪಾಲ್ ಚೌಕ್ನಲ್ಲಿ ಫಿಲ್ಮೀ ಶೈಲಿಯಲ್ಲಿ ಜುವೆಲ್ಲರಿಯನ್ನು ದರೋಡೆ ಮಾಡಲಾಗಿದೆ. ಏಳು ಮಂದಿ ದರೋಡೆಕೋರರು ಆಭರಣ ಮಳಿಗೆಗೆ ನುಗ್ಗಿ ಗನ್ ತೊಕರಿಸಿ ಕೇವಲ ಎಂಟು ನಿಮಿಷಗಳಲ್ಲಿ ಬರೋಬ್ಬರಿ 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಸೋಮವಾರ ಬೆಳಗ್ಗೆ 10.30ರ ವೇಳೆಗೆ ತನಿಷ್ಕ್ ಆಭರಣ ಶೋರೂಮ್ ಓಪನ್ ಆದ ಕೆಲ ಹೊತ್ತಿನಲ್ಲೇ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ಅಲ್ಲಿದ್ದ ಗ್ರಾಹಕರು ಮತ್ತು ಸಿಬಂದಿಯನ್ನು ಕೈ ಮೇಲೆತ್ತುವಂತೆ ಆರ್ಡರ್ ಮಾಡಿದ್ದಾರೆ. ಬಳಿಕ ಎದುರಿದ್ದ ಚಿನ್ನದ ಆಭರಣಗಳನ್ನು ಕಿತ್ತುಕೊಂಡಿದ್ದು ಕೈಗೆ ಸಿಕ್ಕ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಆಭರಣ ಮಳಿಗೆಯಲ್ಲಿದ್ದವರನ್ನು ಗನ್ ಪಾಯಿಂಟ್ನಲ್ಲಿ ಬೆದರಿಸಿ ಚಿನ್ನವನ್ನು ಲೂಟಿ ಮಾಡಿದ್ದಾರೆ.
ದರೋಡೆ ವೇಳೆ ಕುಳಿತ ಸ್ಥಾನದಿಂದ ಎದ್ದು ಬಂದ ಮ್ಯಾನೇಜರ್ ಮೇಲೆ ದರೋಡೆಕೋರರು ಹಲ್ಲೆ ಮಾಡಿದ್ದಾರೆ. 8 ನಿಮಿಷದಲ್ಲಿ ಚಿನ್ನಾಭರಣ ಸೇರಿ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ದರೋಡೆಕೋರರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಲ್ಲಾ ಮುಗಿದ ಮೇಲೆ ಎಂದಿನಂತೆ ಪೊಲೀಸರು ಎಂಟ್ರಿ ಕೊಟ್ಟು ತನಿಖೆ ನಡೆಸಿದ್ದಾರೆ. ಚೇಸ್ ಮಾಡಿ ಇಬ್ಬರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಈ ಕುರಿತು ಮಾತನಾಡಿರುವ ಶೋರೂಂ ಮ್ಯಾನೇಜರ್ ಕುಮಾರ್ ಮೃತ್ಯುಂಜಯ್, ಕಳ್ಳರು ನಗದು ಜೊತೆಗೆ ಚಿನ್ನದ ಸರಗಳು, ನೆಕ್ಲೇಸ್ಗಳು, ಬಳೆ ಮತ್ತು ಕೆಲವು ವಜ್ರ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ತಿಳಿಸಿದ್ದಾರೆ.
ಕಾರಿನಲ್ಲಿ ಐದಾರು ಮಂದಿ ಬಂದಿದ್ದು ಶೋರೂಮ್ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಏಕಕಾಲದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಒಳಹೋಗಲು ಅವಕಾಶ ಇಲ್ಲದ ಕಾರಣ ಅಡ್ಡಿ ಪಡಿಸಿದಾಗ, ಗನ್ ತೋರಿಸಿ ಬೆದರಿಸಿದ್ದಾರೆ. ಆಬಳಿಕ ಚಿನ್ನಾಭರಣ ದೋಚಿದ್ದಾರೆ ಎಂದು ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ.
The heist, which was captured on CCTV inside the showroom, took place at the Gopali Chowk branch, located in the Arrah police station area.According to showroom manager Kumar Mrityunjay, in addition to cash, the robbers took away a range of valuables, including gold chains, necklaces, bangles and some diamonds.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm