ಬ್ರೇಕಿಂಗ್ ನ್ಯೂಸ್
16-03-25 10:39 pm Bangalore Correspondent ಕ್ರೈಂ
ಬೆಂಗಳೂರು, ಮಾ.16 : ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಖಾಸಗಿ ಬ್ಯಾಂಕ್ ಒಂದರ ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡೆಪ್ಯೂಟಿ ಮ್ಯಾನೇಜರ್ ಮೇಘನಾ, ಅವರ ಪತಿ ಶಿವಪ್ರಸಾದ್, ಸ್ನೇಹಿತರಾದ ವರದರಾಜು ಮತ್ತು ಅನ್ವರ್ ಘೋಷ್ ಬಂಧಿತರು.
ಬೆಂಗಳೂರಿನ ಗಿರಿನಗರದ ಖಾಸಗಿ ಬ್ಯಾಂಕ್ವೊಂದರಲ್ಲಿ ವೃದ್ಧ ದಂಪತಿ ಜಾಯಿಂಟ್ ಅಕೌಂಟ್ ತೆರೆದಿದ್ದರು. ಅದೇ ಬ್ಯಾಂಕ್ನಲ್ಲಿ ಎಫ್ಡಿ ಖಾತೆಯನ್ನೂ ಸಹ ಹೊಂದಿದ್ದರು. ಇದೇ ವೇಳೆ, ವೃದ್ಧೆಗೆ ಬ್ಯಾಂಕ್ನ ಡೆಪ್ಯೂಟಿ ಮ್ಯಾನೇಜರ್ ಆಗಿರುವ ಮೇಘನಾ ಪರಿಚಯವಾಗಿತ್ತು. ಬ್ಯಾಂಕ್ ವ್ಯವಹಾರದಲ್ಲಿ ಸಹಾಯ ಮಾಡುತ್ತಿದ್ದ ಮೇಘನಾ ಜೊತೆ ಕುಟುಂಬದ ಕಷ್ಟ ಸುಖಗಳನ್ನು ವೃದ್ಧೆ ಹಂಚಿಕೊಳ್ಳುತ್ತಿದ್ದರು.
ದಂಪತಿ ಚಾಮರಾಜಪೇಟೆಯಲ್ಲಿದ್ದ ಮನೆ ಮಾರಾಟ ಮಾಡಿರುವ ವಿಚಾರವನ್ನೂ ವೃದ್ಧೆ ಮೇಘನಾಗೆ ಹೇಳಿದ್ದರು. ಮನೆ ಮಾರಾಟದಿಂದ ವೃದ್ಧ ದಂಪತಿಯ ಬ್ಯಾಂಕ್ ಖಾತೆಗೆ ಒಂದು ಕೋಟಿ ಹಣ ಜಮೆಯಾಗಿತ್ತು. ಆ ಹಣದ ಮೇಲೆ ಕಣ್ಣಿಟ್ಟಿದ್ದ ಮ್ಯಾನೇಜರ್ ಮೇಘನಾ, ವೃದ್ಧೆ ಬ್ಯಾಂಕ್ಗೆ ಹೋದಾಗ ನಿಮ್ಮ ಎರಡು ಬಾಂಡ್ ಅವಧಿ ಮುಗಿದಿದೆ. ಹೊಸ ಬಾಂಡ್ ಖರೀದಿಗೆ ದಾಖಲಾತಿ ಮತ್ತು ಚೆಕ್ ಅವಶ್ಯಕತೆ ಇದೆ ಎಂದು ಹೇಳಿದ್ದಾಳೆ. ಬಳಿಕ ಮೇಘನಾ ವೃದ್ಧೆಯ ಮನೆಗೆ ತೆರಳಿ ಎರಡು ಖಾಲಿ ಚೆಕ್ ಮೇಲೆ ಸಹಿ ಮಾಡಿಸಿಕೊಂಡು, ಜೊತೆಗೆ ಒಂದಿಷ್ಟು ಕಾಗದ ಪತ್ರಗಳಿಗೂ ಸಹಿ ಪಡೆದಿದ್ದಳು.
ಅದೇ ಸಂದರ್ಭದಲ್ಲಿ ಆರ್ಟಿಜಿಎಸ್ ಪತ್ರಕ್ಕೂ ಸಹಿ ಪಡೆದಿದ್ದ ಮೇಘನಾ, 50 ಲಕ್ಷ ರೂ. ಹಣವನ್ನ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ. ವೃದ್ಧ ದಂಪತಿಯ ಮಗ ಮೊಬೈಲ್ನಲ್ಲಿ ಅಕೌಂಟ್ ಬ್ಯಾಲೆನ್ಸ್ ನೋಡುವಾಗ ಹಣ ಕಡಿಮೆ ಇರುವುದು ಪತ್ತೆಯಾಗಿದೆ. ಬಳಿಕ, ಬ್ಯಾಂಕ್ನಿಂದ ಬಂದಿದ್ದ ಮೆಸೇಜ್ಗಳನ್ನು ಪರಿಶೀಲಿಸಿದ್ದಾರೆ. ಫೆಬ್ರವರಿ 13ರಂದು ಬೇರೆ ಖಾತೆಗೆ ಹಣ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ನಂತರ ವೃದ್ಧೆ ಬ್ಯಾಂಕ್ಗೆ ಹೋಗಿ ಮೇಘಾಳನ್ನು ಪ್ರಶ್ನಿಸಿದಾಗ, 'ನೀವು ಹೇಳಿದ ಖಾತೆಗೆ ಆರ್ಟಿಜಿಎಸ್ ಮಾಡಲಾಗಿದೆ' ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾಳೆ.
ಬಳಿಕ ವೃದ್ಧೆ ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಮ್ಯಾನೇಜರ್ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
The Girinagar police have made significant strides in combating financial fraud with the arrest of four individuals, including a deputy manager of a prominent private bank, in connection with the swindling of an elderly woman out of Rs 50 lakh. The accused, identified as Meghana, the deputy manager, along with her husband Shivaprasad and their acquaintances Varadaraju and Anwar Ghosh, were apprehended following an investigation launched after the victim reported the fraudulent activities.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm