ಬ್ರೇಕಿಂಗ್ ನ್ಯೂಸ್
17-03-25 07:51 pm Mangalore Correspondent ಕ್ರೈಂ
ಮಂಗಳೂರು, ಮಾ.17: ಮಂಗಳೂರು, ಪುತ್ತೂರು, ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ಎದುರಿಸುತ್ತಿದ್ದ ಕಲಿ ಯೋಗೀಶನ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ ನಿಷೇಧಿತ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಸೀರ್ @ ಸದ್ದು @ ಸಾದು @ ಮಾಯ(32) ಬಂಧಿತ ವ್ಯಕ್ತಿ. ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಬ್ದುಲ್ ಅಸೀರ್ ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ನಂತೂರು ಪರಿಸರದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ವಶದಿಂದ ಸುಮಾರು 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಅಸೀರ್ ವಿದೇಶದಲ್ಲಿ ತಲೆಮರೆಸಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ವಾರಂಟ್ ಜಾರಿಯಲ್ಲಿರುತ್ತದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ, ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಎಎಸ್ಐಗಳಾದ ಮೋಹನ್ ಕೆ.ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Mangalore Underworld Associate of Gangster Kali Yogesh Arrested after Nine Years on the Run, Police Seize Drugs. The arrested has been identified as Mohammed Asheer Maya.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm