ಬ್ರೇಕಿಂಗ್ ನ್ಯೂಸ್
17-03-25 07:51 pm Mangalore Correspondent ಕ್ರೈಂ
ಮಂಗಳೂರು, ಮಾ.17: ಮಂಗಳೂರು, ಪುತ್ತೂರು, ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ಎದುರಿಸುತ್ತಿದ್ದ ಕಲಿ ಯೋಗೀಶನ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ ನಿಷೇಧಿತ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಸೀರ್ @ ಸದ್ದು @ ಸಾದು @ ಮಾಯ(32) ಬಂಧಿತ ವ್ಯಕ್ತಿ. ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಬ್ದುಲ್ ಅಸೀರ್ ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ನಂತೂರು ಪರಿಸರದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ವಶದಿಂದ ಸುಮಾರು 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಅಸೀರ್ ವಿದೇಶದಲ್ಲಿ ತಲೆಮರೆಸಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ವಾರಂಟ್ ಜಾರಿಯಲ್ಲಿರುತ್ತದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ, ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಎಎಸ್ಐಗಳಾದ ಮೋಹನ್ ಕೆ.ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Mangalore Underworld Associate of Gangster Kali Yogesh Arrested after Nine Years on the Run, Police Seize Drugs. The arrested has been identified as Mohammed Asheer Maya.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm