ಬ್ರೇಕಿಂಗ್ ನ್ಯೂಸ್
17-03-25 07:51 pm Mangalore Correspondent ಕ್ರೈಂ
ಮಂಗಳೂರು, ಮಾ.17: ಮಂಗಳೂರು, ಪುತ್ತೂರು, ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ಎದುರಿಸುತ್ತಿದ್ದ ಕಲಿ ಯೋಗೀಶನ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ ನಿಷೇಧಿತ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಸೀರ್ @ ಸದ್ದು @ ಸಾದು @ ಮಾಯ(32) ಬಂಧಿತ ವ್ಯಕ್ತಿ. ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಬ್ದುಲ್ ಅಸೀರ್ ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ನಂತೂರು ಪರಿಸರದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ವಶದಿಂದ ಸುಮಾರು 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಅಸೀರ್ ವಿದೇಶದಲ್ಲಿ ತಲೆಮರೆಸಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ವಾರಂಟ್ ಜಾರಿಯಲ್ಲಿರುತ್ತದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ, ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಎಎಸ್ಐಗಳಾದ ಮೋಹನ್ ಕೆ.ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Mangalore Underworld Associate of Gangster Kali Yogesh Arrested after Nine Years on the Run, Police Seize Drugs. The arrested has been identified as Mohammed Asheer Maya.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm