ಬ್ರೇಕಿಂಗ್ ನ್ಯೂಸ್
20-03-25 04:13 pm Mangalore Correspondent ಕ್ರೈಂ
ಮಂಗಳೂರು, ಮಾ.20 : ಗೂಗಲ್ ನಲ್ಲಿ ಪೇಯಿಂಗ್ ಗೆಸ್ಟ್ ಬಗ್ಗೆ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟು ಚೆನ್ನಾಗಿಲ್ಲ ಎಂದು ಕಮೆಂಟ್ ಹಾಕಿದ್ದಕ್ಕೆ ಪಿಜಿ ಮಾಲೀಕ ಮತ್ತು ಆತನ ಪಟಾಲಂ ಸೇರಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿಯುತ್ತಿರುವ ಕಲಬುರಗಿ ಜಿಲ್ಲೆಯ ಮೂಲದ ವಿಕಾಸ್ (18) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಮಾರ್ಚ್ 17ರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದು, ಕದ್ರಿ ದೇವಸ್ಥಾನದ ಬಳಿಯ ಕುಕ್ಕೆಶ್ರೀ ಬಾಯ್ಸ್ ಪಿಜಿ ವಿರುದ್ಧ ಯುವಕ ಕದ್ರಿ ಠಾಣೆಗೆ ದೂರು ನೀಡಿದ್ದಾನೆ.
ವಿಕಾಸ್ ಕಳೆದ ಆರು ತಿಂಗಳಿನಿಂದ ಅದೇ ಪಿಜಿಯಲ್ಲಿದ್ದು, ಊಟದಲ್ಲಿ ಹುಳ ಬಿದ್ದಿರುವುದು, ಕ್ಲೀನ ಇಲ್ಲದಿರುವುದು, ಅತಿ ಕೆಟ್ಟ ಶೌಚಾಲಯ ಇದ್ದುದರಿಂದ ಬೇಸತ್ತು ಬೇರೆ ಪಿಜಿಗೆ ಹೋಗಿದ್ದ. ಈ ಬಗ್ಗೆ ಗೂಗಲ್ ನಲ್ಲಿ ಕುಕ್ಕೆಶ್ರೀ ಪಿಜಿ ಬಗ್ಗೆ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟು ಏನೂ ಚೆನ್ನಾಗಿಲ್ಲ ಎಂದು ಕಮೆಂಟ್ ಹಾಕಿದ್ದ. ಇದನ್ನು ಗಮನಿಸಿದ ಪಿಜಿ ಮಾಲೀಕ ಸಂತೋಷ್ ಎಂಬಾತ, ಕಮೆಂಟ್ ಡಿಲೀಟ್ ಮಾಡುವಂತೆ ಬೆದರಿಕೆ ಹಾಕಿದ್ದ. ಅಳಿಸಿ ಹಾಕದೇ ಇದ್ದುದಕ್ಕೆ ಸಂತೋಷ್ ಮತ್ತು ಆತನ ಪಟಾಲಂ ಸೇರಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸರಿಗೆ ದೂರು ನೀಡಿದ್ದರೂ ಕೈಯಿಂದ ಹಲ್ಲೆ ಮಾಡಿದ್ದು ತೊಂದರೆ ಇಲ್ಲ ಎಂದು ಹೇಳಿ ಎಫ್ಐಆರ್ ಮಾಡಿಲ್ವಂತೆ. ಪೊಲೀಸರು ದೂರು ಪಡೆದು ಹಿಂದಕ್ಕೆ ಕಳಿಸಿದ್ದಾರೆ.
ವಿದ್ಯಾರ್ಥಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾವು ಪೊಲೀಸ್ ದೂರು ಕೊಟ್ಟಿದ್ದೇವೆ, ಆದರೆ ಕೈಯಲ್ಲಿ ಹಲ್ಲೆ ಮಾಡಿದ್ದಕ್ಕೆ ಕಂಪ್ಲೇಂಟ್ ರಿಜಿಸ್ಟರ್ ಮಾಡೋದಿಲ್ಲ ಎಂದಿದ್ದಾರೆ. ನಮಗೇನೂ ಗೊತ್ತಿರಲಿಲ್ಲ. ವಿದ್ಯಾರ್ಥಿ ಸಂಘಟನೆಯವರದ್ದೂ ಪರಿಚಯ ಇಲ್ಲ. ಅಲ್ಲಿ ಪಿಜಿ ಏನೂ ಚೆನ್ನಾಗಿಲ್ಲ. ನಾನೂ ಅಲ್ಲಿದ್ದೆ. ಹಾಗಾಗಿ ಕಮೆಂಟ್ ಹಾಕಿದ್ದೆ. ಅದಕ್ಕೆ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾನೆ. ಅಲ್ಲಿನ ಪಿಜಿಯ ವ್ಯವಸ್ಥೆ ಎಷ್ಟು ಕ್ಲೀನ್ ಇದೆಯೆಂದು ವಿದ್ಯಾರ್ಥಿ ತನ್ನಲ್ಲಿದ್ದ ಫೋಟೋಗಳನ್ನು ಮಾಧ್ಯಮಕ್ಕೆ ನೀಡಿದ್ದು ವಾಸ್ತವ ಸ್ಥಿತಿ ತೋರಿಸುತ್ತಿದೆ.
Engineering Student Attacked After Posting Negative Google Review About PG at kadri, Complaint Filed Against Owner in Mangalore.An engineering student, Vikas (18), hailing from Kalaburagi district, has been assaulted following his negative review about a paying guest (PG) accommodation in Mangalore. The incident took place on the night of March 17, around 10:30 PM, near the Kadri Temple, where Vikas lodged a complaint at the Kadri police station against the operator of the PG named Kukeshree Boys PG.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm