ಬ್ರೇಕಿಂಗ್ ನ್ಯೂಸ್
22-03-25 10:51 pm Mangalore Correspondent ಕ್ರೈಂ
ಮಂಗಳೂರು, ಮಾ.22 : ವ್ಯಕ್ತಿಯೊಬ್ಬರಿಗೆ ಟೆಲಿಗ್ರಾಮ್ ಏಪ್ ನಲ್ಲಿ ಪರಿಚಯವಾಗಿದ್ದ ಮಹಿಳೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಲಾಭ ಸಿಗುತ್ತದೆ ಎಂದು ನಂಬಿಸಿ ಹೂಡಿಕೆ ಮಾಡಿಸಿದ್ದು, ಮಂಗಳೂರು ಮೂಲದ ದುಬೈ ಉದ್ಯೋಗಿ ಬರೋಬ್ಬರಿ 76 ಲಕ್ಷ ರೂಪಾಯಿ ಕಳಕೊಂಡು ಮೋಸ ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
50 ವರ್ಷದ ಮಂಗಳೂರಿನ ವ್ಯಕ್ತಿ ದುಬೈನಲ್ಲಿ 18 ವರ್ಷಗಳಿಂದ ಪೆಟ್ರೋಲಿಯಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆರು ತಿಂಗಳ ಹಿಂದೆ ರಜೆಯಲ್ಲಿ ಊರಿಗೆ ಮರಳಿದ್ದರು. ಈ ವೇಳೆ, ಕಳೆದ ಡಿಸೆಂಬರ್ 12ರಂದು ಸಾಗರಿಕ ಅಗರ್ವಾಲ್ ಎಂದು ಪರಿಚಯ ಮಾಡಿಕೊಂಡಿದ್ದ ಮಹಿಳೆ ಸಂಪರ್ಕವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಬಗ್ಗೆ ತಿಳಿಸಿದ್ದರು. ಆನಂತರ ವಾಟ್ಸಪ್ ಖಾತೆಯಲ್ಲಿ ಮೆಸೇಜ್ ಮಾಡುತ್ತ ಹೂಡಿಕೆ ಮಾಡಲು ಒತ್ತಾಯಿಸಿದ್ದರು.
Spreadxx.com ಹೆಸರಿನಲ್ಲಿ ಲಿಂಕ್ ಕಳುಹಿಸಿದ್ದು, ಅದರ ಮೂಲಕ ಗ್ರೂಪ್ ಜಾಯಿನ್ ಆಗಿದ್ದ ಮಂಗಳೂರಿನ ವ್ಯಕ್ತಿ ಮೊದಲಿಗೆ ತನ್ನ ದುಬೈ ಬ್ಯಾಂಕಿನಿಂದ 27600 ರೂ. ಅದೇ ಅಸಲಿ ಷೇರು ಮಾರುಕಟ್ಟೆಯೆಂದು ನಂಬಿ ಹೂಡಿಕೆ ಮಾಡಿದ್ದರು. ಆನಂತರ, ಮತ್ತಷ್ಟು ಹಣ ಹೂಡಿಕೆ ಮಾಡಲು ಆಮಿಷವೊಡ್ಡಿದ್ದು, ಮಂಗಳೂರಿನ ಯೆಯ್ಯಾಡಿ ಎಸ್ ಬಿಐ ಶಾಖೆಯ ಎನ್ಆರ್ ಐ ಖಾತೆಯಿಂದ 10.82 ಲಕ್ಷ ರೂ. ರವಾನೆ ಮಾಡಿದ್ದಾರೆ. ಆನಂತರ, ಡಿ.20ರಿಂದ 2025ರ ಮಾರ್ಚ್ 3ರ ವರೆಗೆ ಅಪರಿಚಿತ ವ್ಯಕ್ತಿಯ ವಿವಿಧ ಖಾತೆಗಳಿಗೆ ಹಣ ರವಾನಿಸಿದ್ದು ಒಟ್ಟು 76,32,146 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು.
ಷೇರು ಮಾರುಕಟ್ಟೆಯೆಂದು ತೋರಿಸುತ್ತಿದ್ದ ಏಪ್ ನಲ್ಲಿ ತಾನು ಹೂಡಿದ್ದ ಹಣವು ಡಬಲ್ ಆಗಿದ್ದಲ್ಲದೆ, ಒಂದು ಕೋಟಿ 36 ಲಕ್ಷ ಆಗಿರುವಂತೆ ಕಂಡುಬಂದಿತ್ತು. ಇದರಂತೆ, ಮಾರ್ಚ್ 13ರಂದು ಅದರ ಒಂದಷ್ಟು ಮೊತ್ತವನ್ನು ಹಿಂತಿರುಗಿಸಲು ವ್ಯಕ್ತಿ ಕೇಳಿಕೊಂಡಿದ್ದು, ಹಣ ಹಿಂತಿರುಗಿಸಬೇಕಿದ್ದರೆ ಇಂತಿಷ್ಟು ತೆರಿಗೆ ಕಟ್ಟಬೇಕೆಂದು ಕೇಳಿದ್ದಾರೆ. ಮತ್ತೆ ಮತ್ತೆ ತೆರಿಗೆ ಪಾವತಿಸಲು ಹೇಳಿದ್ದರಿಂದ ಸಂಶಯಗೊಂಡಿದ್ದು ಮೋಸದ ಅರಿವಾಗಿ ಮಂಗಳೂರಿನ ಉರ್ವಾ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at the CEN police station after a man lost Rs 76,32,145 by falling prey to a stock market investment scam on Telegram.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm