ಬ್ರೇಕಿಂಗ್ ನ್ಯೂಸ್
22-03-25 10:51 pm Mangalore Correspondent ಕ್ರೈಂ
ಮಂಗಳೂರು, ಮಾ.22 : ವ್ಯಕ್ತಿಯೊಬ್ಬರಿಗೆ ಟೆಲಿಗ್ರಾಮ್ ಏಪ್ ನಲ್ಲಿ ಪರಿಚಯವಾಗಿದ್ದ ಮಹಿಳೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಲಾಭ ಸಿಗುತ್ತದೆ ಎಂದು ನಂಬಿಸಿ ಹೂಡಿಕೆ ಮಾಡಿಸಿದ್ದು, ಮಂಗಳೂರು ಮೂಲದ ದುಬೈ ಉದ್ಯೋಗಿ ಬರೋಬ್ಬರಿ 76 ಲಕ್ಷ ರೂಪಾಯಿ ಕಳಕೊಂಡು ಮೋಸ ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
50 ವರ್ಷದ ಮಂಗಳೂರಿನ ವ್ಯಕ್ತಿ ದುಬೈನಲ್ಲಿ 18 ವರ್ಷಗಳಿಂದ ಪೆಟ್ರೋಲಿಯಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆರು ತಿಂಗಳ ಹಿಂದೆ ರಜೆಯಲ್ಲಿ ಊರಿಗೆ ಮರಳಿದ್ದರು. ಈ ವೇಳೆ, ಕಳೆದ ಡಿಸೆಂಬರ್ 12ರಂದು ಸಾಗರಿಕ ಅಗರ್ವಾಲ್ ಎಂದು ಪರಿಚಯ ಮಾಡಿಕೊಂಡಿದ್ದ ಮಹಿಳೆ ಸಂಪರ್ಕವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಬಗ್ಗೆ ತಿಳಿಸಿದ್ದರು. ಆನಂತರ ವಾಟ್ಸಪ್ ಖಾತೆಯಲ್ಲಿ ಮೆಸೇಜ್ ಮಾಡುತ್ತ ಹೂಡಿಕೆ ಮಾಡಲು ಒತ್ತಾಯಿಸಿದ್ದರು.
Spreadxx.com ಹೆಸರಿನಲ್ಲಿ ಲಿಂಕ್ ಕಳುಹಿಸಿದ್ದು, ಅದರ ಮೂಲಕ ಗ್ರೂಪ್ ಜಾಯಿನ್ ಆಗಿದ್ದ ಮಂಗಳೂರಿನ ವ್ಯಕ್ತಿ ಮೊದಲಿಗೆ ತನ್ನ ದುಬೈ ಬ್ಯಾಂಕಿನಿಂದ 27600 ರೂ. ಅದೇ ಅಸಲಿ ಷೇರು ಮಾರುಕಟ್ಟೆಯೆಂದು ನಂಬಿ ಹೂಡಿಕೆ ಮಾಡಿದ್ದರು. ಆನಂತರ, ಮತ್ತಷ್ಟು ಹಣ ಹೂಡಿಕೆ ಮಾಡಲು ಆಮಿಷವೊಡ್ಡಿದ್ದು, ಮಂಗಳೂರಿನ ಯೆಯ್ಯಾಡಿ ಎಸ್ ಬಿಐ ಶಾಖೆಯ ಎನ್ಆರ್ ಐ ಖಾತೆಯಿಂದ 10.82 ಲಕ್ಷ ರೂ. ರವಾನೆ ಮಾಡಿದ್ದಾರೆ. ಆನಂತರ, ಡಿ.20ರಿಂದ 2025ರ ಮಾರ್ಚ್ 3ರ ವರೆಗೆ ಅಪರಿಚಿತ ವ್ಯಕ್ತಿಯ ವಿವಿಧ ಖಾತೆಗಳಿಗೆ ಹಣ ರವಾನಿಸಿದ್ದು ಒಟ್ಟು 76,32,146 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು.
ಷೇರು ಮಾರುಕಟ್ಟೆಯೆಂದು ತೋರಿಸುತ್ತಿದ್ದ ಏಪ್ ನಲ್ಲಿ ತಾನು ಹೂಡಿದ್ದ ಹಣವು ಡಬಲ್ ಆಗಿದ್ದಲ್ಲದೆ, ಒಂದು ಕೋಟಿ 36 ಲಕ್ಷ ಆಗಿರುವಂತೆ ಕಂಡುಬಂದಿತ್ತು. ಇದರಂತೆ, ಮಾರ್ಚ್ 13ರಂದು ಅದರ ಒಂದಷ್ಟು ಮೊತ್ತವನ್ನು ಹಿಂತಿರುಗಿಸಲು ವ್ಯಕ್ತಿ ಕೇಳಿಕೊಂಡಿದ್ದು, ಹಣ ಹಿಂತಿರುಗಿಸಬೇಕಿದ್ದರೆ ಇಂತಿಷ್ಟು ತೆರಿಗೆ ಕಟ್ಟಬೇಕೆಂದು ಕೇಳಿದ್ದಾರೆ. ಮತ್ತೆ ಮತ್ತೆ ತೆರಿಗೆ ಪಾವತಿಸಲು ಹೇಳಿದ್ದರಿಂದ ಸಂಶಯಗೊಂಡಿದ್ದು ಮೋಸದ ಅರಿವಾಗಿ ಮಂಗಳೂರಿನ ಉರ್ವಾ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at the CEN police station after a man lost Rs 76,32,145 by falling prey to a stock market investment scam on Telegram.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm