ಬ್ರೇಕಿಂಗ್ ನ್ಯೂಸ್
22-03-25 10:51 pm Mangalore Correspondent ಕ್ರೈಂ
ಮಂಗಳೂರು, ಮಾ.22 : ವ್ಯಕ್ತಿಯೊಬ್ಬರಿಗೆ ಟೆಲಿಗ್ರಾಮ್ ಏಪ್ ನಲ್ಲಿ ಪರಿಚಯವಾಗಿದ್ದ ಮಹಿಳೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಲಾಭ ಸಿಗುತ್ತದೆ ಎಂದು ನಂಬಿಸಿ ಹೂಡಿಕೆ ಮಾಡಿಸಿದ್ದು, ಮಂಗಳೂರು ಮೂಲದ ದುಬೈ ಉದ್ಯೋಗಿ ಬರೋಬ್ಬರಿ 76 ಲಕ್ಷ ರೂಪಾಯಿ ಕಳಕೊಂಡು ಮೋಸ ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
50 ವರ್ಷದ ಮಂಗಳೂರಿನ ವ್ಯಕ್ತಿ ದುಬೈನಲ್ಲಿ 18 ವರ್ಷಗಳಿಂದ ಪೆಟ್ರೋಲಿಯಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆರು ತಿಂಗಳ ಹಿಂದೆ ರಜೆಯಲ್ಲಿ ಊರಿಗೆ ಮರಳಿದ್ದರು. ಈ ವೇಳೆ, ಕಳೆದ ಡಿಸೆಂಬರ್ 12ರಂದು ಸಾಗರಿಕ ಅಗರ್ವಾಲ್ ಎಂದು ಪರಿಚಯ ಮಾಡಿಕೊಂಡಿದ್ದ ಮಹಿಳೆ ಸಂಪರ್ಕವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಬಗ್ಗೆ ತಿಳಿಸಿದ್ದರು. ಆನಂತರ ವಾಟ್ಸಪ್ ಖಾತೆಯಲ್ಲಿ ಮೆಸೇಜ್ ಮಾಡುತ್ತ ಹೂಡಿಕೆ ಮಾಡಲು ಒತ್ತಾಯಿಸಿದ್ದರು.
Spreadxx.com ಹೆಸರಿನಲ್ಲಿ ಲಿಂಕ್ ಕಳುಹಿಸಿದ್ದು, ಅದರ ಮೂಲಕ ಗ್ರೂಪ್ ಜಾಯಿನ್ ಆಗಿದ್ದ ಮಂಗಳೂರಿನ ವ್ಯಕ್ತಿ ಮೊದಲಿಗೆ ತನ್ನ ದುಬೈ ಬ್ಯಾಂಕಿನಿಂದ 27600 ರೂ. ಅದೇ ಅಸಲಿ ಷೇರು ಮಾರುಕಟ್ಟೆಯೆಂದು ನಂಬಿ ಹೂಡಿಕೆ ಮಾಡಿದ್ದರು. ಆನಂತರ, ಮತ್ತಷ್ಟು ಹಣ ಹೂಡಿಕೆ ಮಾಡಲು ಆಮಿಷವೊಡ್ಡಿದ್ದು, ಮಂಗಳೂರಿನ ಯೆಯ್ಯಾಡಿ ಎಸ್ ಬಿಐ ಶಾಖೆಯ ಎನ್ಆರ್ ಐ ಖಾತೆಯಿಂದ 10.82 ಲಕ್ಷ ರೂ. ರವಾನೆ ಮಾಡಿದ್ದಾರೆ. ಆನಂತರ, ಡಿ.20ರಿಂದ 2025ರ ಮಾರ್ಚ್ 3ರ ವರೆಗೆ ಅಪರಿಚಿತ ವ್ಯಕ್ತಿಯ ವಿವಿಧ ಖಾತೆಗಳಿಗೆ ಹಣ ರವಾನಿಸಿದ್ದು ಒಟ್ಟು 76,32,146 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು.
ಷೇರು ಮಾರುಕಟ್ಟೆಯೆಂದು ತೋರಿಸುತ್ತಿದ್ದ ಏಪ್ ನಲ್ಲಿ ತಾನು ಹೂಡಿದ್ದ ಹಣವು ಡಬಲ್ ಆಗಿದ್ದಲ್ಲದೆ, ಒಂದು ಕೋಟಿ 36 ಲಕ್ಷ ಆಗಿರುವಂತೆ ಕಂಡುಬಂದಿತ್ತು. ಇದರಂತೆ, ಮಾರ್ಚ್ 13ರಂದು ಅದರ ಒಂದಷ್ಟು ಮೊತ್ತವನ್ನು ಹಿಂತಿರುಗಿಸಲು ವ್ಯಕ್ತಿ ಕೇಳಿಕೊಂಡಿದ್ದು, ಹಣ ಹಿಂತಿರುಗಿಸಬೇಕಿದ್ದರೆ ಇಂತಿಷ್ಟು ತೆರಿಗೆ ಕಟ್ಟಬೇಕೆಂದು ಕೇಳಿದ್ದಾರೆ. ಮತ್ತೆ ಮತ್ತೆ ತೆರಿಗೆ ಪಾವತಿಸಲು ಹೇಳಿದ್ದರಿಂದ ಸಂಶಯಗೊಂಡಿದ್ದು ಮೋಸದ ಅರಿವಾಗಿ ಮಂಗಳೂರಿನ ಉರ್ವಾ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at the CEN police station after a man lost Rs 76,32,145 by falling prey to a stock market investment scam on Telegram.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm