ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm