ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm