ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm