ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm