ಬ್ರೇಕಿಂಗ್ ನ್ಯೂಸ್
28-03-25 06:12 pm Bangalore Correspondent ಕ್ರೈಂ
ಬೆಂಗಳೂರು, ಮಾ.28 : ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಸುಂದರಿ ಪತ್ನಿಯನ್ನು ಸಾಫ್ಟ್ವೇರ್ ಪತಿಯೇ ಭೀಕರವಾಗಿ ಕೊಲೆಗೈದು ಪೀಸ್ ಪೀಸ್ ಮಾಡಿ ಸೂಟ್ ಕೇಸಿನಲ್ಲಿ ತುಂಬಿಸಿಟ್ಟು ಮನೆಯಿಂದ ಪರಾರಿಯಾದ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯ ಹೆಸರು ಗೌರಿ ಅನಿಲ್ ಸಾಂಬೇಕರ್. ಮಾಸ್ ಕಮ್ಯುನಿಕೇಷನ್ನಲ್ಲಿ ಡಿಗ್ರಿ ಮುಗಿಸಿದ್ದ ಗೌರಿ ಗಂಡನೊಂದಿಗೆ ಬೆಂಗಳೂರಿಗೆ ಬಂದು ಕೆಲಸದ ಹುಡುಕಾಟ ನಡೆಸುತ್ತಿದ್ದಳು. ಪತಿ ರಾಕೇಶ್ ಮಹಾರಾಷ್ಟ್ರದ ಪುಣೆ ಮೂಲದ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ.
ಒಂದು ತಿಂಗಳ ಹಿಂದಷ್ಟೇ ಬೆಂಗಳೂರಿನ ಹುಳಿಮಾವು ಪರಿಸರದ ದೊಡ್ಡ ಕಮ್ಮನಹಳ್ಳಿಯ ಬಾಡಿಗೆ ಮನೆ ಮಾಡಿ ನೆಲೆಸಿದ್ದರು. ಪತ್ನಿ ಗೌರಿ, ಮನೆಯಲ್ಲೇ ಇದ್ದು ಕೆಲಸ ಹುಡುಕುತ್ತಿದ್ದಳು. ಈ ನಡುವೆ, ಪತಿ ರಾಕೇಶ್ ವರ್ಕ್ ಫ್ರಮ್ ಹೋಮ್ ಕೆಲ್ಸ ಮಾಡುತ್ತಿದ್ದ. ಸುಖ ಜೀವನದಲ್ಲಿದ್ದಾಗಲೇ ಮೊನ್ನೆ ರಾತ್ರಿ ಊಟದ ಸಮಯದಲ್ಲಿ ಪತಿ- ಪತ್ನಿ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಗಲಾಟೆ ವಿರೋಪಕ್ಕೆ ತಿರುಗಿದ್ದು ರಾಕೇಶ್ ಕೋಪದಲ್ಲಿ ಚೂರಿಯಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಕುತ್ತಿಗೆ, ಹೊಟ್ಟೆಯ ಭಾಗದಲ್ಲಿ ಕೊಯ್ದು ಸೂಟ್ಕೇಸ್ಗೆ ತುಂಬಿಸಿ ಹೊರಕ್ಕೆ ಒಯ್ಯಲು ಯತ್ನಿಸಿದ್ದಾನೆ.
ಆದರೆ ಸೂಟ್ಕೇಸ್ ತುಂಬಿದ್ದ ರಾಕೇಶ್ ನಡುರಾತ್ರಿ 12.30ರ ಸುಮಾರಿಗೆ ಒಬ್ಬನೇ ನಡೆದುಕೊಂಡು ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಇದಕ್ಕೂ ಮುನ್ನ ಪತ್ನಿ ಗೌರಿ ಮನೆಯವರಿಗೆ ಮತ್ತು ತಾವು ಬಾಡಿಗೆ ಇದ್ದ ಕೆಳಗಿನ ಮನೆಯವರಿಗೂ ಕರೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ವಿಷ್ಯ ತಿಳಿಸಿದ್ದಾನೆ. ಕೆಳಗಿನ ಮನೆಯಲ್ಲಿದ್ದ ಮಾಲೀಕರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು. ಬಳಿಕ ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು, ಮನೆಯ ಬಾಗಿಲು ಓಪನ್ ಮಾಡಿದಾಗ ಟಾಯ್ಲೆಟ್ನಲ್ಲಿ ಇಟ್ಟಿದ್ದ ಸೂಟ್ಕೇಸ್ನಲ್ಲಿ ಶವ ಪತ್ತೆ ಆಗಿದೆ.
ಇದೇ ವೇಳೆ, ಪೊಲೀಸರು ಆರೋಪಿ ರಾಕೇಶ್ ಸಿಂಗ್ ನನ್ನು ಸಿಡಿಆರ್ ಮೂಲಕ ಟ್ರೇಸ್ ಮಾಡಿದ್ದು ಪುಣೆಯಲ್ಲಿ ಬಂಧಿಸಿದ್ದಾರೆ.
A 36-year-old man has been arrested in connection with the murder of his 32-year-old wife, whose body was found stuffed in a suitcase at their rented house in south Bengaluru.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm