ಬ್ರೇಕಿಂಗ್ ನ್ಯೂಸ್
28-03-25 06:12 pm Bangalore Correspondent ಕ್ರೈಂ
ಬೆಂಗಳೂರು, ಮಾ.28 : ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಸುಂದರಿ ಪತ್ನಿಯನ್ನು ಸಾಫ್ಟ್ವೇರ್ ಪತಿಯೇ ಭೀಕರವಾಗಿ ಕೊಲೆಗೈದು ಪೀಸ್ ಪೀಸ್ ಮಾಡಿ ಸೂಟ್ ಕೇಸಿನಲ್ಲಿ ತುಂಬಿಸಿಟ್ಟು ಮನೆಯಿಂದ ಪರಾರಿಯಾದ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯ ಹೆಸರು ಗೌರಿ ಅನಿಲ್ ಸಾಂಬೇಕರ್. ಮಾಸ್ ಕಮ್ಯುನಿಕೇಷನ್ನಲ್ಲಿ ಡಿಗ್ರಿ ಮುಗಿಸಿದ್ದ ಗೌರಿ ಗಂಡನೊಂದಿಗೆ ಬೆಂಗಳೂರಿಗೆ ಬಂದು ಕೆಲಸದ ಹುಡುಕಾಟ ನಡೆಸುತ್ತಿದ್ದಳು. ಪತಿ ರಾಕೇಶ್ ಮಹಾರಾಷ್ಟ್ರದ ಪುಣೆ ಮೂಲದ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ.
ಒಂದು ತಿಂಗಳ ಹಿಂದಷ್ಟೇ ಬೆಂಗಳೂರಿನ ಹುಳಿಮಾವು ಪರಿಸರದ ದೊಡ್ಡ ಕಮ್ಮನಹಳ್ಳಿಯ ಬಾಡಿಗೆ ಮನೆ ಮಾಡಿ ನೆಲೆಸಿದ್ದರು. ಪತ್ನಿ ಗೌರಿ, ಮನೆಯಲ್ಲೇ ಇದ್ದು ಕೆಲಸ ಹುಡುಕುತ್ತಿದ್ದಳು. ಈ ನಡುವೆ, ಪತಿ ರಾಕೇಶ್ ವರ್ಕ್ ಫ್ರಮ್ ಹೋಮ್ ಕೆಲ್ಸ ಮಾಡುತ್ತಿದ್ದ. ಸುಖ ಜೀವನದಲ್ಲಿದ್ದಾಗಲೇ ಮೊನ್ನೆ ರಾತ್ರಿ ಊಟದ ಸಮಯದಲ್ಲಿ ಪತಿ- ಪತ್ನಿ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಗಲಾಟೆ ವಿರೋಪಕ್ಕೆ ತಿರುಗಿದ್ದು ರಾಕೇಶ್ ಕೋಪದಲ್ಲಿ ಚೂರಿಯಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಕುತ್ತಿಗೆ, ಹೊಟ್ಟೆಯ ಭಾಗದಲ್ಲಿ ಕೊಯ್ದು ಸೂಟ್ಕೇಸ್ಗೆ ತುಂಬಿಸಿ ಹೊರಕ್ಕೆ ಒಯ್ಯಲು ಯತ್ನಿಸಿದ್ದಾನೆ.
ಆದರೆ ಸೂಟ್ಕೇಸ್ ತುಂಬಿದ್ದ ರಾಕೇಶ್ ನಡುರಾತ್ರಿ 12.30ರ ಸುಮಾರಿಗೆ ಒಬ್ಬನೇ ನಡೆದುಕೊಂಡು ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಇದಕ್ಕೂ ಮುನ್ನ ಪತ್ನಿ ಗೌರಿ ಮನೆಯವರಿಗೆ ಮತ್ತು ತಾವು ಬಾಡಿಗೆ ಇದ್ದ ಕೆಳಗಿನ ಮನೆಯವರಿಗೂ ಕರೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ವಿಷ್ಯ ತಿಳಿಸಿದ್ದಾನೆ. ಕೆಳಗಿನ ಮನೆಯಲ್ಲಿದ್ದ ಮಾಲೀಕರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು. ಬಳಿಕ ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು, ಮನೆಯ ಬಾಗಿಲು ಓಪನ್ ಮಾಡಿದಾಗ ಟಾಯ್ಲೆಟ್ನಲ್ಲಿ ಇಟ್ಟಿದ್ದ ಸೂಟ್ಕೇಸ್ನಲ್ಲಿ ಶವ ಪತ್ತೆ ಆಗಿದೆ.
ಇದೇ ವೇಳೆ, ಪೊಲೀಸರು ಆರೋಪಿ ರಾಕೇಶ್ ಸಿಂಗ್ ನನ್ನು ಸಿಡಿಆರ್ ಮೂಲಕ ಟ್ರೇಸ್ ಮಾಡಿದ್ದು ಪುಣೆಯಲ್ಲಿ ಬಂಧಿಸಿದ್ದಾರೆ.
A 36-year-old man has been arrested in connection with the murder of his 32-year-old wife, whose body was found stuffed in a suitcase at their rented house in south Bengaluru.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm