ಬ್ರೇಕಿಂಗ್ ನ್ಯೂಸ್
28-03-25 06:12 pm Bangalore Correspondent ಕ್ರೈಂ
ಬೆಂಗಳೂರು, ಮಾ.28 : ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಸುಂದರಿ ಪತ್ನಿಯನ್ನು ಸಾಫ್ಟ್ವೇರ್ ಪತಿಯೇ ಭೀಕರವಾಗಿ ಕೊಲೆಗೈದು ಪೀಸ್ ಪೀಸ್ ಮಾಡಿ ಸೂಟ್ ಕೇಸಿನಲ್ಲಿ ತುಂಬಿಸಿಟ್ಟು ಮನೆಯಿಂದ ಪರಾರಿಯಾದ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯ ಹೆಸರು ಗೌರಿ ಅನಿಲ್ ಸಾಂಬೇಕರ್. ಮಾಸ್ ಕಮ್ಯುನಿಕೇಷನ್ನಲ್ಲಿ ಡಿಗ್ರಿ ಮುಗಿಸಿದ್ದ ಗೌರಿ ಗಂಡನೊಂದಿಗೆ ಬೆಂಗಳೂರಿಗೆ ಬಂದು ಕೆಲಸದ ಹುಡುಕಾಟ ನಡೆಸುತ್ತಿದ್ದಳು. ಪತಿ ರಾಕೇಶ್ ಮಹಾರಾಷ್ಟ್ರದ ಪುಣೆ ಮೂಲದ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ.
ಒಂದು ತಿಂಗಳ ಹಿಂದಷ್ಟೇ ಬೆಂಗಳೂರಿನ ಹುಳಿಮಾವು ಪರಿಸರದ ದೊಡ್ಡ ಕಮ್ಮನಹಳ್ಳಿಯ ಬಾಡಿಗೆ ಮನೆ ಮಾಡಿ ನೆಲೆಸಿದ್ದರು. ಪತ್ನಿ ಗೌರಿ, ಮನೆಯಲ್ಲೇ ಇದ್ದು ಕೆಲಸ ಹುಡುಕುತ್ತಿದ್ದಳು. ಈ ನಡುವೆ, ಪತಿ ರಾಕೇಶ್ ವರ್ಕ್ ಫ್ರಮ್ ಹೋಮ್ ಕೆಲ್ಸ ಮಾಡುತ್ತಿದ್ದ. ಸುಖ ಜೀವನದಲ್ಲಿದ್ದಾಗಲೇ ಮೊನ್ನೆ ರಾತ್ರಿ ಊಟದ ಸಮಯದಲ್ಲಿ ಪತಿ- ಪತ್ನಿ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಗಲಾಟೆ ವಿರೋಪಕ್ಕೆ ತಿರುಗಿದ್ದು ರಾಕೇಶ್ ಕೋಪದಲ್ಲಿ ಚೂರಿಯಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಕುತ್ತಿಗೆ, ಹೊಟ್ಟೆಯ ಭಾಗದಲ್ಲಿ ಕೊಯ್ದು ಸೂಟ್ಕೇಸ್ಗೆ ತುಂಬಿಸಿ ಹೊರಕ್ಕೆ ಒಯ್ಯಲು ಯತ್ನಿಸಿದ್ದಾನೆ.
ಆದರೆ ಸೂಟ್ಕೇಸ್ ತುಂಬಿದ್ದ ರಾಕೇಶ್ ನಡುರಾತ್ರಿ 12.30ರ ಸುಮಾರಿಗೆ ಒಬ್ಬನೇ ನಡೆದುಕೊಂಡು ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಇದಕ್ಕೂ ಮುನ್ನ ಪತ್ನಿ ಗೌರಿ ಮನೆಯವರಿಗೆ ಮತ್ತು ತಾವು ಬಾಡಿಗೆ ಇದ್ದ ಕೆಳಗಿನ ಮನೆಯವರಿಗೂ ಕರೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ವಿಷ್ಯ ತಿಳಿಸಿದ್ದಾನೆ. ಕೆಳಗಿನ ಮನೆಯಲ್ಲಿದ್ದ ಮಾಲೀಕರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು. ಬಳಿಕ ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು, ಮನೆಯ ಬಾಗಿಲು ಓಪನ್ ಮಾಡಿದಾಗ ಟಾಯ್ಲೆಟ್ನಲ್ಲಿ ಇಟ್ಟಿದ್ದ ಸೂಟ್ಕೇಸ್ನಲ್ಲಿ ಶವ ಪತ್ತೆ ಆಗಿದೆ.
ಇದೇ ವೇಳೆ, ಪೊಲೀಸರು ಆರೋಪಿ ರಾಕೇಶ್ ಸಿಂಗ್ ನನ್ನು ಸಿಡಿಆರ್ ಮೂಲಕ ಟ್ರೇಸ್ ಮಾಡಿದ್ದು ಪುಣೆಯಲ್ಲಿ ಬಂಧಿಸಿದ್ದಾರೆ.
A 36-year-old man has been arrested in connection with the murder of his 32-year-old wife, whose body was found stuffed in a suitcase at their rented house in south Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm