ಬ್ರೇಕಿಂಗ್ ನ್ಯೂಸ್
31-03-25 09:29 pm Mangalore Correspondent ಕ್ರೈಂ
ಮಂಗಳೂರು, ಮಾ.31 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಕಮಿಷನರ್ ಅವರನ್ನೇ ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಕಮಿಷನರ್ ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ ವಿರುದ್ಧ ಉರ್ವಾ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಬ್ರೋಕರ್ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಬಿತ್ (25) ಎಂಬ ಇಬ್ಬರ ವಿರುದ್ಧ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು. ಇದರ ಸಿಸಿಟಿವಿ ವಿಡಿಯೋ ಹೊರ ಬಂದಿದ್ದರಿಂದ ಮುಡಾ ಕಚೇರಿಯ ಬ್ರೋಕರ್ ವ್ಯವಹಾರ ಜಗಜ್ಜಾಹೀರಾಗಿತ್ತು. ಆನಂತರ ಮೂಡಾ ಕಮಿಷನರ್ ನೂರ್ ಝಹರಾ ಅವರು, ಸಿಬಂದಿ ಹೊರತುಪಡಿಸಿ ಇತರ ಯಾರು ಕೂಡ ಕಚೇರಿ ಒಳ ಬರುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದರು.
ಇದರಿಂದ ಕಸಿವಿಸಿಗೊಳಗಾದ ಬ್ರೋಕರ್ ಗಳು ಮುಡಾ ಕಮಿಷನರ್ ವಿರುದ್ಧ ಇತರ ಬ್ರೋಕರುಗಳನ್ನು ಒಟ್ಟುಗೂಡಿಸಿ ವಾಟ್ಸಪ್ ಗ್ರೂಪ್ ರಚಿಸಿ ಮಹಿಳಾ ಕಮಿಷನರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಕೊಂಡಿದ್ದರು. ಅಧಿಕಾರಿ ಬಗ್ಗೆ ಅವಮಾನಕರ ಸಂದೇಶಗಳನ್ನು ಪೋಸ್ಟ್ ಮಾಡುವುದು, ಗುಂಪು ಕೂಡಿಕೊಂಡು ಕಚೇರಿ ಒಳಗೆ ಬಂದು ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಫೋನ್ ಮೂಲಕ ಜೀವ ಬೆದರಿಕೆ ಒಡ್ಡುವುದು ಮಾಡುತ್ತಿದ್ದರು.
ಅಲ್ಲದೆ, ಸಾರ್ವಜನಿಕರ ಮುಂದೆ ಕಮಿಷನರ್ ಅವರನ್ನು ಅವಮಾನಿಸುವುದು, ಜನರನ್ನು ಸೇರಿಸಿ ಶಾಂತಿ ಕದಡಲು ಯತ್ನಿಸಿದ್ದಲ್ಲದೆ, ವಾಮಾಚಾರ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಮುಡಾ ಕಮಿಷನರ್ ನೂರ್ ಝಹರಾ ದೂರಿನಲ್ಲಿ ತಿಳಿಸಿದ್ದಾರೆ.
FIR has been registered against two brokers following allegations of blackmail and threats directed at Noor Zahara Khanam, the Muda Commissioner. The complaint was lodged after Khanam reportedly received life threats and was pressured into compliance through intimidation tactics.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm