ಬ್ರೇಕಿಂಗ್ ನ್ಯೂಸ್
31-03-25 09:29 pm Mangalore Correspondent ಕ್ರೈಂ
ಮಂಗಳೂರು, ಮಾ.31 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಕಮಿಷನರ್ ಅವರನ್ನೇ ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಕಮಿಷನರ್ ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ ವಿರುದ್ಧ ಉರ್ವಾ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಬ್ರೋಕರ್ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಬಿತ್ (25) ಎಂಬ ಇಬ್ಬರ ವಿರುದ್ಧ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು. ಇದರ ಸಿಸಿಟಿವಿ ವಿಡಿಯೋ ಹೊರ ಬಂದಿದ್ದರಿಂದ ಮುಡಾ ಕಚೇರಿಯ ಬ್ರೋಕರ್ ವ್ಯವಹಾರ ಜಗಜ್ಜಾಹೀರಾಗಿತ್ತು. ಆನಂತರ ಮೂಡಾ ಕಮಿಷನರ್ ನೂರ್ ಝಹರಾ ಅವರು, ಸಿಬಂದಿ ಹೊರತುಪಡಿಸಿ ಇತರ ಯಾರು ಕೂಡ ಕಚೇರಿ ಒಳ ಬರುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದರು.
ಇದರಿಂದ ಕಸಿವಿಸಿಗೊಳಗಾದ ಬ್ರೋಕರ್ ಗಳು ಮುಡಾ ಕಮಿಷನರ್ ವಿರುದ್ಧ ಇತರ ಬ್ರೋಕರುಗಳನ್ನು ಒಟ್ಟುಗೂಡಿಸಿ ವಾಟ್ಸಪ್ ಗ್ರೂಪ್ ರಚಿಸಿ ಮಹಿಳಾ ಕಮಿಷನರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಕೊಂಡಿದ್ದರು. ಅಧಿಕಾರಿ ಬಗ್ಗೆ ಅವಮಾನಕರ ಸಂದೇಶಗಳನ್ನು ಪೋಸ್ಟ್ ಮಾಡುವುದು, ಗುಂಪು ಕೂಡಿಕೊಂಡು ಕಚೇರಿ ಒಳಗೆ ಬಂದು ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಫೋನ್ ಮೂಲಕ ಜೀವ ಬೆದರಿಕೆ ಒಡ್ಡುವುದು ಮಾಡುತ್ತಿದ್ದರು.
ಅಲ್ಲದೆ, ಸಾರ್ವಜನಿಕರ ಮುಂದೆ ಕಮಿಷನರ್ ಅವರನ್ನು ಅವಮಾನಿಸುವುದು, ಜನರನ್ನು ಸೇರಿಸಿ ಶಾಂತಿ ಕದಡಲು ಯತ್ನಿಸಿದ್ದಲ್ಲದೆ, ವಾಮಾಚಾರ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಮುಡಾ ಕಮಿಷನರ್ ನೂರ್ ಝಹರಾ ದೂರಿನಲ್ಲಿ ತಿಳಿಸಿದ್ದಾರೆ.
FIR has been registered against two brokers following allegations of blackmail and threats directed at Noor Zahara Khanam, the Muda Commissioner. The complaint was lodged after Khanam reportedly received life threats and was pressured into compliance through intimidation tactics.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm