ಬ್ರೇಕಿಂಗ್ ನ್ಯೂಸ್
03-04-25 05:01 pm HK News Desk ಕ್ರೈಂ
ಕಲಬುರಗಿ, ಎ.3 : ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಕಲಬುರಗಿ ನಗರದಲ್ಲಿ ನಡೆದಿದೆ.
ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್ನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿ ಸಂತೋಷ್ ಕೊರಳಿ (45) ನೇಣು ಬಿಗಿದುಕೊಂಡಿದ್ದು ಇದಕ್ಕೂ ಮುನ್ನ ಪತ್ನಿ ಶೃತಿ (35), ಮಕ್ಕಳಾದ ಮುನೀಶ್ (9) ಹಾಗೂ ಮೂರು ತಿಂಗಳ ಮಗು ಅನೀಶ್ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸಂತೋಷ್ ಅವರು ಕಲಬುರಗಿ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದು ಸಿಕ್ಕಿದೆ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
'ಸಂತೋಷ್ ಹಾಗೂ ಶೃತಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ನಡುವೆ ಪದೇ ಪದೇ ಗಲಾಟೆ ಆಗುತ್ತಿತ್ತು. ಏಳು ವರ್ಷಗಳಿಂದ ಎರಡೂ ಕುಟುಂಬದ ಸಂಬಂಧಿಕರ ಜೊತೆಗೆ ಸಂಪರ್ಕ ಹೊಂದಿರಲಿಲ್ಲ. ಬುಧವಾರ ಸಂತೋಷ್ ಅವರು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಮತ್ತೆ ಗಲಾಟೆಯಾಗಿದೆ. ಕೌಟುಂಬಿಕ ಕಲಹಕ್ಕೆ ಈ ದುರುಂತ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident that has left the local community in disbelief, a government employee of JESCOM reportedly killed his wife and two children before taking his own life in a tragic family dispute.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm