ಬ್ರೇಕಿಂಗ್ ನ್ಯೂಸ್
03-04-25 05:01 pm HK News Desk ಕ್ರೈಂ
ಕಲಬುರಗಿ, ಎ.3 : ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಕಲಬುರಗಿ ನಗರದಲ್ಲಿ ನಡೆದಿದೆ.
ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್ನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿ ಸಂತೋಷ್ ಕೊರಳಿ (45) ನೇಣು ಬಿಗಿದುಕೊಂಡಿದ್ದು ಇದಕ್ಕೂ ಮುನ್ನ ಪತ್ನಿ ಶೃತಿ (35), ಮಕ್ಕಳಾದ ಮುನೀಶ್ (9) ಹಾಗೂ ಮೂರು ತಿಂಗಳ ಮಗು ಅನೀಶ್ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸಂತೋಷ್ ಅವರು ಕಲಬುರಗಿ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದು ಸಿಕ್ಕಿದೆ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
'ಸಂತೋಷ್ ಹಾಗೂ ಶೃತಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ನಡುವೆ ಪದೇ ಪದೇ ಗಲಾಟೆ ಆಗುತ್ತಿತ್ತು. ಏಳು ವರ್ಷಗಳಿಂದ ಎರಡೂ ಕುಟುಂಬದ ಸಂಬಂಧಿಕರ ಜೊತೆಗೆ ಸಂಪರ್ಕ ಹೊಂದಿರಲಿಲ್ಲ. ಬುಧವಾರ ಸಂತೋಷ್ ಅವರು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಮತ್ತೆ ಗಲಾಟೆಯಾಗಿದೆ. ಕೌಟುಂಬಿಕ ಕಲಹಕ್ಕೆ ಈ ದುರುಂತ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident that has left the local community in disbelief, a government employee of JESCOM reportedly killed his wife and two children before taking his own life in a tragic family dispute.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm