ಬ್ರೇಕಿಂಗ್ ನ್ಯೂಸ್
04-04-25 03:03 pm Mangalore Correspondent ಕ್ರೈಂ
ಮಂಗಳೂರು, ಎ.4 : ಸಂಸತ್ತಿನಲ್ಲಿ ವಕ್ಫ್ ಮಸೂದೆ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ವಕ್ಫ್ ಆಸ್ತಿ ಅಕ್ರಮದ ಬಗ್ಗೆ ವರದಿ ನೀಡಿದ್ದ ರಾಜ್ಯ ಅಲ್ಪಸಂಖ್ಯಾತ ಆಯೋಗ ಮತ್ತು ವಕ್ಫ್ ಕಮಿಟಿಯ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಜೀವ ಬೆದರಿಕೆ ಕರೆಗಳು ಬಂದಿವೆ.
ಎರಡು ದಿನಗಳಿಂದ ನಿರಂತರ ಇಂಟರ್ನೆಟ್ ಕರೆ ಮೂಲಕ ಬೆದರಿಕೆ ಬರುತ್ತಿದೆ. ಕನ್ನಡ, ಇಂಗ್ಲಿಷ್, ಉರ್ದು, ಮರಾಠಿ ಭಾಷೆಗಳಲ್ಲಿ ಬೆದರಿಕೆ ಹಾಕುತ್ತಿದ್ದಾರೆ. ನಿನ್ನನ್ನು ಬಿಡುವುದಿಲ್ಲ, ನಿನ್ನ ವರದಿಯಿಂದ ತೊಂದರೆಯಾಗಿದೆ ಅನ್ನೋ ಕರೆಗಳು ಬರುತ್ತಿದೆ ಎಂದು ಅನ್ವರ್ ಮಾಣಿಪ್ಪಾಡಿ ತಿಳಿಸಿದ್ದಾರೆ.
ನೀನು ಬಹಳಷ್ಟು ನಾಯಕರು, ವ್ಯಕ್ತಿಗಳ ವಿರುದ್ಧ ತಪ್ಪು ಮಾಹಿತಿ ಕೊಟ್ಟಿದ್ದೀಯ. ಎಲ್ಲರೂ ನೊಂದಿದ್ದಾರೆ. ಯಾರು ಕೂಡ ನಿನ್ನನ್ನು ಕ್ಷಮಿಸಲ್ಲ. ನಿಮ್ಮನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ನನ್ನ ಕಸಿನ್ ಒಬ್ಬರು ಪೊಲೀಸ್ ಆಫೀಸರ್. ನನಗೆ ಕರೆ ಮಾಡಿ ಜೋಪಾನವಾಗಿರಪ್ಪ, ಮನೆಯಿಂದ ಹೊರಗಡೆ ಒಬ್ಬನೇ ಹೋಗಬೇಡ ಅಂತ ಸಲಹೆ ನೀಡಿದ್ದಾರೆ ಎಂದು ಮಾಣಿಪ್ಪಾಡಿ ಮಾಹಿತಿ ಹಂಚಿಕೊಂಡಿದ್ದಾರೆ
ನನ್ನ ವರದಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಉಲ್ಲೇಖಿಸಿದ್ದೇನೆ. ಕಲಬುರಗಿಯಲ್ಲಿ ದೊಡ್ಡ ದೊಡ್ಡ ಮಾಲ್, ಬಿಲ್ಡಿಂಗ್ಗಳಿವೆ. ಅವರ ಹೆಸರಲ್ಲಿ ಅಲ್ಲದಿದ್ದರೂ, ಬೇರೆಯವರ ಹೆಸರಲ್ಲಿ ಒತ್ತುವರಿಯಾಗಿದೆ. ಬಹುಪಾಲು ಬೇನಾಮಿ ಆಸ್ತಿ ಎಂದು ತಿಳಿಸಿದ್ದಾರೆ.
ಸಂಸತ್ನಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ ಈಗ ದೇಶಾದ್ಯಂತ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ವಕ್ಫ್ ವಿಚಾರದಲ್ಲಿ ವರದಿ ತಯಾರಿಸಿದ್ದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆಗಳು ಬಂದಿದ್ದು ಮಸೂದೆ ತಿದ್ದುಪಡಿಗೆ ಇವರು ಕೊಟ್ಟ ಅಂಶಗಳೇ ಕಾರಣ ಎಂದು ವಿಶ್ಲೇಷಣೆ ಮಾಡಲಾಗಿದೆ.
Former Karnataka State Minority Commission chairman Anwar Manippady has reportedly received multiple threat calls after his report was cited during a discussion on the Waqf Amendment Bill in the Lok Sabha. During the debate, Union Home Minister Amit Shah had referred to the Karnataka Waqf land report submitted by Manippady. Following this, the former commission chief allegedly started receiving threat calls in Hindi, Marathi, English, Tulu, and other North Indian languages.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 12:10 pm
Mangalore Correspondent
Ullal Montepadavu Landslide, Rain, Flood: ಮೊಂ...
31-05-25 12:05 pm
Sudheer Kumar Reddy, Mangalore Police Commiss...
30-05-25 10:46 pm
Mangalore Rain, Ullal, Death: ಮಳೆ ಅವಾಂತರ ; ಉಳ...
30-05-25 10:20 pm
Mangalore, IPS Dr Arun, Dakshina Kannada SP:...
30-05-25 05:18 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm