ಬ್ರೇಕಿಂಗ್ ನ್ಯೂಸ್
07-04-25 11:23 am Mangalore Correspondent ಕ್ರೈಂ
ಮಂಗಳೂರು, ಎ.7 : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಮುಸ್ಲಿಂ ಧರ್ಮಗುರು ಒಬ್ಬನನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
2022ರಲ್ಲಿ ಸಂತ್ರಸ್ತ ಮಹಿಳೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು , ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು ಉಸ್ತಾದ್ ಎಂಬ ಹೆಸರಿನ ಈ ಅಬ್ದುಲ್ ಕರೀಮ್ ಎಂಬಾತ ಮಹಿಳೆಯನ್ನು ನೋಡಿ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ.
ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ತನ್ನ ಮನೆಗೆ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿಯ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಮಹಿಳೆಗೆ ಕುರಾನ್ ಓದಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. 2022, ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿಯ ಮನೆಗೆ ಹೋಗಿದ್ದರು. ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಬಳಿಕ ಆಕೆಗೆ ಚಿಕಿತ್ಸೆಯ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ. ಮತ್ತು ಮಹಿಳೆಯಿಂದ 55,000 ರೂ. ಪಡೆದಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ತಾನು ಹೆಜಮಾಡಿಗೆ ಹೋದಾಗಲೆಲ್ಲಾ, ತನ್ನಲ್ಲಿ ಚಿಕಿತ್ಸೆಗೆ ಜಾಸ್ತಿ ಹಣ ಖರ್ಚಾಗುತ್ತದೆ ಎಂದು ಉಸ್ತಾದ್ ಹೇಳಿ ತನ್ನನ್ನು ವಂಚಿಸಿ ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ನಾಯಕ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Maulvi Arrested for Sexually Harassing Woman Under Guise of Black Magic Rituals. The arrested has been identified as G Abdul Kareem alias Kuloor Ustad, a resident of Guruvayanakere.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm