ಬ್ರೇಕಿಂಗ್ ನ್ಯೂಸ್
07-04-25 11:23 am Mangalore Correspondent ಕ್ರೈಂ
ಮಂಗಳೂರು, ಎ.7 : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಮುಸ್ಲಿಂ ಧರ್ಮಗುರು ಒಬ್ಬನನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
2022ರಲ್ಲಿ ಸಂತ್ರಸ್ತ ಮಹಿಳೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು , ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು ಉಸ್ತಾದ್ ಎಂಬ ಹೆಸರಿನ ಈ ಅಬ್ದುಲ್ ಕರೀಮ್ ಎಂಬಾತ ಮಹಿಳೆಯನ್ನು ನೋಡಿ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ.
ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ತನ್ನ ಮನೆಗೆ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿಯ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಮಹಿಳೆಗೆ ಕುರಾನ್ ಓದಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. 2022, ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿಯ ಮನೆಗೆ ಹೋಗಿದ್ದರು. ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಬಳಿಕ ಆಕೆಗೆ ಚಿಕಿತ್ಸೆಯ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ. ಮತ್ತು ಮಹಿಳೆಯಿಂದ 55,000 ರೂ. ಪಡೆದಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ತಾನು ಹೆಜಮಾಡಿಗೆ ಹೋದಾಗಲೆಲ್ಲಾ, ತನ್ನಲ್ಲಿ ಚಿಕಿತ್ಸೆಗೆ ಜಾಸ್ತಿ ಹಣ ಖರ್ಚಾಗುತ್ತದೆ ಎಂದು ಉಸ್ತಾದ್ ಹೇಳಿ ತನ್ನನ್ನು ವಂಚಿಸಿ ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ನಾಯಕ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Maulvi Arrested for Sexually Harassing Woman Under Guise of Black Magic Rituals. The arrested has been identified as G Abdul Kareem alias Kuloor Ustad, a resident of Guruvayanakere.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm