ಬ್ರೇಕಿಂಗ್ ನ್ಯೂಸ್
07-04-25 10:51 pm HK News Desk ಕ್ರೈಂ
ಕಲಬುರಗಿ, ಏ 07: ಅತ್ತೆ ಮನೆಗೆ ಕನ್ನ ಹಾಕಿದ ಅಳಿಯನೊಬ್ಬ ಪೊಲೀಸರ ಕೈಗೆ ತಗ್ಲಾಕೊಂಡಿರೋ ಘಟನೆ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿರೋ ಆರೋಪಿ.
ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂ. ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ (ಸಹೋದರನ ಮಗ) ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ

ಆದ್ರೆ, ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.
ಹೀಗೆ ಅತ್ತೆ ಮನೆಯಲ್ಲಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಅದನ್ನು ಸಹೋದರನ ಜೊತೆ ಸೇರಿ ಮೀನಪ್ಪ ಬೇರೆಡೆ ಶಿಫ್ಟ್ ಮಾಡಿಸಿದ್ದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯಿಂದ ಸತ್ಯ ಬಾಯಿಬಿಡಿಸಿ ಕಳ್ಳತನವಾದ 11 ಲಕ್ಷ ರೂ. ಪೈಕಿ 9 ಲಕ್ಷ 30 ಸಾವಿರ ರೂಪಾಯಿ ಜಪ್ತಿ ಮಾಡಿದ್ದಾರೆ. ಉಳಿದ 1 ಲಕ್ಷ 70 ಸಾವಿರ ರೂಪಾಯಿ ಜೊತೆಗೆ ಪರಾರಿಯಾಗಿರೋ ಮೀನಪ್ಪನ ಸಹೋದರ ಅನೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ, ಕಾಳಗಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kalaburagi theft, son in law Steals Lakhs from mother in law house.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm