ಬ್ರೇಕಿಂಗ್ ನ್ಯೂಸ್
07-04-25 10:51 pm HK News Desk ಕ್ರೈಂ
ಕಲಬುರಗಿ, ಏ 07: ಅತ್ತೆ ಮನೆಗೆ ಕನ್ನ ಹಾಕಿದ ಅಳಿಯನೊಬ್ಬ ಪೊಲೀಸರ ಕೈಗೆ ತಗ್ಲಾಕೊಂಡಿರೋ ಘಟನೆ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿರೋ ಆರೋಪಿ.
ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂ. ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ (ಸಹೋದರನ ಮಗ) ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ

ಆದ್ರೆ, ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.
ಹೀಗೆ ಅತ್ತೆ ಮನೆಯಲ್ಲಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಅದನ್ನು ಸಹೋದರನ ಜೊತೆ ಸೇರಿ ಮೀನಪ್ಪ ಬೇರೆಡೆ ಶಿಫ್ಟ್ ಮಾಡಿಸಿದ್ದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯಿಂದ ಸತ್ಯ ಬಾಯಿಬಿಡಿಸಿ ಕಳ್ಳತನವಾದ 11 ಲಕ್ಷ ರೂ. ಪೈಕಿ 9 ಲಕ್ಷ 30 ಸಾವಿರ ರೂಪಾಯಿ ಜಪ್ತಿ ಮಾಡಿದ್ದಾರೆ. ಉಳಿದ 1 ಲಕ್ಷ 70 ಸಾವಿರ ರೂಪಾಯಿ ಜೊತೆಗೆ ಪರಾರಿಯಾಗಿರೋ ಮೀನಪ್ಪನ ಸಹೋದರ ಅನೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ, ಕಾಳಗಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kalaburagi theft, son in law Steals Lakhs from mother in law house.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm