ಬ್ರೇಕಿಂಗ್ ನ್ಯೂಸ್
07-04-25 10:51 pm HK News Desk ಕ್ರೈಂ
ಕಲಬುರಗಿ, ಏ 07: ಅತ್ತೆ ಮನೆಗೆ ಕನ್ನ ಹಾಕಿದ ಅಳಿಯನೊಬ್ಬ ಪೊಲೀಸರ ಕೈಗೆ ತಗ್ಲಾಕೊಂಡಿರೋ ಘಟನೆ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿರೋ ಆರೋಪಿ.
ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂ. ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ (ಸಹೋದರನ ಮಗ) ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ

ಆದ್ರೆ, ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.
ಹೀಗೆ ಅತ್ತೆ ಮನೆಯಲ್ಲಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಅದನ್ನು ಸಹೋದರನ ಜೊತೆ ಸೇರಿ ಮೀನಪ್ಪ ಬೇರೆಡೆ ಶಿಫ್ಟ್ ಮಾಡಿಸಿದ್ದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯಿಂದ ಸತ್ಯ ಬಾಯಿಬಿಡಿಸಿ ಕಳ್ಳತನವಾದ 11 ಲಕ್ಷ ರೂ. ಪೈಕಿ 9 ಲಕ್ಷ 30 ಸಾವಿರ ರೂಪಾಯಿ ಜಪ್ತಿ ಮಾಡಿದ್ದಾರೆ. ಉಳಿದ 1 ಲಕ್ಷ 70 ಸಾವಿರ ರೂಪಾಯಿ ಜೊತೆಗೆ ಪರಾರಿಯಾಗಿರೋ ಮೀನಪ್ಪನ ಸಹೋದರ ಅನೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ, ಕಾಳಗಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kalaburagi theft, son in law Steals Lakhs from mother in law house.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm