ಬ್ರೇಕಿಂಗ್ ನ್ಯೂಸ್
07-04-25 10:51 pm HK News Desk ಕ್ರೈಂ
ಕಲಬುರಗಿ, ಏ 07: ಅತ್ತೆ ಮನೆಗೆ ಕನ್ನ ಹಾಕಿದ ಅಳಿಯನೊಬ್ಬ ಪೊಲೀಸರ ಕೈಗೆ ತಗ್ಲಾಕೊಂಡಿರೋ ಘಟನೆ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿರೋ ಆರೋಪಿ.
ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂ. ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ (ಸಹೋದರನ ಮಗ) ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ

ಆದ್ರೆ, ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.
ಹೀಗೆ ಅತ್ತೆ ಮನೆಯಲ್ಲಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಅದನ್ನು ಸಹೋದರನ ಜೊತೆ ಸೇರಿ ಮೀನಪ್ಪ ಬೇರೆಡೆ ಶಿಫ್ಟ್ ಮಾಡಿಸಿದ್ದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯಿಂದ ಸತ್ಯ ಬಾಯಿಬಿಡಿಸಿ ಕಳ್ಳತನವಾದ 11 ಲಕ್ಷ ರೂ. ಪೈಕಿ 9 ಲಕ್ಷ 30 ಸಾವಿರ ರೂಪಾಯಿ ಜಪ್ತಿ ಮಾಡಿದ್ದಾರೆ. ಉಳಿದ 1 ಲಕ್ಷ 70 ಸಾವಿರ ರೂಪಾಯಿ ಜೊತೆಗೆ ಪರಾರಿಯಾಗಿರೋ ಮೀನಪ್ಪನ ಸಹೋದರ ಅನೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ, ಕಾಳಗಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kalaburagi theft, son in law Steals Lakhs from mother in law house.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am