ಬ್ರೇಕಿಂಗ್ ನ್ಯೂಸ್
08-04-25 09:26 pm HK News Desk ಕ್ರೈಂ
ರಾಯಚೂರು, ಎ.8 : ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಗೋಲ್ಡ್ ಲೋನ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಪ್ರಕರಣ ನಡೆದಿದ್ದು ರಾಯಚೂರು ಪೊಲೀಸರು ಬ್ಯಾಂಕ್ ಮ್ಯಾನೇಜರ್ ಮತ್ತು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ ಕೆ. ನರೇಂದ್ರ ರೆಡ್ಡಿ ಹಾಗೂ ಕೆನರಾ ಬ್ಯಾಂಕ್ ನಿವೃತ್ತ ಸಿಬ್ಬಂದಿ ಅರುಣಾ ಬಂಧಿತ ಆರೋಪಿಗಳು. 2025 ಮಾರ್ಚ್ 7ರಂದು ಬ್ಯಾಂಕ್ ಆಫ್ ಮಹಾರಾಷ್ಟ್ರದ ರೀಜನಲ್ ಮ್ಯಾನೇಜರ್ ಸುಚೇತ್, 10.97 ಕೋಟಿ ರೂ. ಗೋಲ್ಡ್ ಲೋನ್ ಹಣ ಮಿಸ್ಸಿಂಗ್ ಆಗಿರುವ ಬಗ್ಗೆ ರಾಯಚೂರು ಸೈಬರ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಸಂದರ್ಭದಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರ ರಾಯಚೂರು ಶಾಖೆಯ ಮ್ಯಾನೇಜರ್ ಕೆ.ನರೇಂದ್ರ ರೆಡ್ಡಿ ಮತ್ತು ನಿವೃತ್ತ ಬ್ಯಾಂಕ್ ಸಿಬಂದಿ ಅರುಣಾ ಎನ್ನುವವರು ಪ್ರಮುಖ ಆರೋಪಿಗಳು ಅನ್ನೋದು ಗೊತ್ತಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಸಿಬಂದಿಯೇ ಗ್ರಾಹಕರಿಗೆ ತಿಳಿಯದಂತೆ 30 ಮಂದಿಯ ಹೆಸರಿನಲ್ಲಿ ಖಾತೆ ತೆರೆದಿದ್ದಲ್ಲದೆ, ಅವರ ಹೆಸರಿನಲ್ಲೇ ನಕಲಿ ಚಿನ್ನ ಇಟ್ಟು ಸಾಲ ತೆಗೆದಿದ್ದಾರೆ. ಅಲ್ಲದೆ, ಡಿಪಾಸಿಟ್ ಮಾಡಲಾಗಿದ್ದ ಒಟ್ಟು 10 ಕೋಟಿ 97 ಲಕ್ಷ ರೂಪಾಯಿ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದು ಬ್ಯಾಂಕಿನ ಆಂತರಿಕ ತನಿಖೆಯಲ್ಲಿ ಪತ್ತೆಯಾಗಿದೆ.
ಸದ್ಯ ಪ್ರಕರಣದಲ್ಲಿ ಇಬ್ಬರನ್ನು ಆರೆಸ್ಟ್ ಮಾಡಲಾಗಿದ್ದು, 79 ಲಕ್ಷದ 25 ಸಾವಿರ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಅರುಣಾದೇವಿ ಮತ್ತು ನರೇಂದ್ರ ರೆಡ್ಡಿ ಅವರು ಆಂಧ್ರಪ್ರದೇಶ್ ಕರ್ನೂಲ್ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪರಿಚಯವಿತ್ತು. ಪರಿಚಯದ ಮೇಲೆ ಮ್ಯಾನೇಜರ್ ನರೇಂದ್ರ ರೆಡ್ಡಿ ಅವರು ತಾನು ಮೋಸದಲ್ಲಿ ಲಪಟಾಯಿಸಿದ ಹಣವನ್ನು ಅರುಣಾದೇವಿ ಖಾತೆಗೆ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ಇದೀಗ ಇಬ್ಬರನ್ನು ಬಂಧಿಸಿ, ತನಿಖೆಯನ್ನು ಮುಂದುವರೆಸಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
Raichur Bank of Maharashtra Rs10.9 crore gold fraud, two including manager arrested. CEN Police in the district had received a complaint regarding a bank manager, accusing him of defrauding customers of Rs10.9 crore under the pretext of gold loans. Last week, a complaint was submitted to the CEN police station by Sujeet D'Souza, a zonal officer at Bank of Maharashtra in Vidyanagar, Hubballi
08-09-25 02:41 pm
Bangalore Correspondent
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm