ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm