ಬ್ರೇಕಿಂಗ್ ನ್ಯೂಸ್
09-04-25 11:17 pm HK News Desk ಕ್ರೈಂ
ಜೈಪುರ, ಎ.9 : ಸಾಮೂಹಿಕ ವಿವಾಹದ ನೆಪದಲ್ಲಿ ಬಡ ಯುವತಿಯರನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ್ ಎನ್ ಜಿಒ ತಂಡವನ್ನು ರಾಜಸ್ಥಾನ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ.
ರಾಜಸ್ತಾನ ರಾಜಧಾನಿ ಜೈಪುರ ಸಮೀಪದಲ್ಲಿ ಸಾಮೂಹಿಕ ವಿವಾಹದ ಹೆಸರಲ್ಲಿ ಬಡ ಕುಟುಂಬದ ಯುವತಿಯರನ್ನು ಪುರುಷರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಇದರೊಂದಿಗೆ ಬಹುದೊಡ್ಡ ಮಾನವ ಕಳ್ಳ ಸಾಗಣೆ ಜಾಲ ಬಯಲಿಗೆ ಬಂದಿದೆ. ಸಾಮೂಹಿಕ ವಿವಾಹ ಆಯೋಜನೆ ಮಾಡುತ್ತಿದ್ದ ಎನ್ ಜಿಒ ಸಂಘಟನೆಯೊಂದು ಯುವತಿಯರನ್ನು 2.5 ಲಕ್ಷದಿಂದ 5 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿತ್ತು ಎಂಬ ಆರೋಪಗಳಿವೆ.
ಬಡ ಕುಟುಂಬಗಳ ಮಹಿಳೆಯರಿಗಾಗಿ ಎನ್ ಜಿಓ ಸಾಮೂಹಿಕ ವಿವಾಹಗಳನ್ನು ಆಯೋಜಿಸುತ್ತಿತ್ತು. ಬಡ ಕುಟುಂಬಗಳಿಂದ ಹುಡುಗಿಯರನ್ನು ಕಳ್ಳಸಾಗಣೆ ಮಾಡುವ ಏಜೆಂಟ್ಗಳಿಂದ 'ಖರೀದಿಸಿ' ವಧುವನ್ನು ಹುಡುಕುತ್ತಿರುವ ಯುವಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಪುರದಿಂದ ಸುಮಾರು 30 ಕಿ.ಮೀ ದೂರದ ಬಸ್ಸಿಯ ಸುಜನ್ಪುರ ಗ್ರಾಮದಲ್ಲಿ ಗಾಯತ್ರಿ ಸರ್ವ ಸಮಾಜ ಪ್ರತಿಷ್ಠಾನ ಎಂಬ ಎನ್ ಜಿಓ ಹೆಸರಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂಸ್ಥೆ ಸಾಮೂಹಿಕ ವಿವಾಹಗಳನ್ನು ಆಯೋಜಿಸುವುದಾಗಿ ಹೇಳಿಕೊಂಡಿತ್ತು. ಗಾಯತ್ರಿ ಎಂಬ ಮಹಿಳೆ ಇದರ ಮುಖ್ಯಸ್ಥಳಾಗಿದ್ದು, ಮದುವೆಯಾಗಲು ಬಯಸುತ್ತಿದ್ದ ಯುವಕರಿಗೆ ಹುಡುಗಿಯರ ಫೋಟೋ ತೋರಿಸಿ ಅವರಿಂದ ಹಣ ಪಡೆದು ಯುವತಿಯರನ್ನು ಮಾರಾಟ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ಯಾಂಗ್ನ ಸದಸ್ಯರು ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಉತ್ತರ ಪ್ರದೇಶದ ಬಡ ಕುಟುಂಬಗಳ ಹುಡುಗಿಯರನ್ನು ಎನ್ಜಿಒ ನಿರ್ದೇಶಕಿ ಗಾಯತ್ರಿಗೆ ಒಪ್ಪಿಸುತ್ತಿದ್ದರು. ಬಳಿಕ ಆಕೆ ತನ್ನ ಸಂಸ್ಥೆಗೆ ಮದುವೆಯಾಗಲು ಬರುವ ಗಂಡು ಮಕ್ಕಳಿಗೆ ಯುವತಿಯರ ಫೋಟೋ ತೋರಿಸಿ ಸೌಂದರ್ಯದ ಆಧಾರದ ಮೇಲೆ 2.5 ಲಕ್ಷ ರೂ.ನಿಂದ 5 ಲಕ್ಷ ರೂ. ವರೆಗೆ ಬೆಲೆ ನಿರ್ಧರಿಸುತ್ತಿದ್ದಳು. ಅಪ್ರಾಪ್ತ ವಯಸ್ಕರಿಗೆ 18 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ತೋರಿಸಲು ನಕಲಿ ಆಧಾರ್ ಕಾರ್ಡ್ಗಳನ್ನು ವ್ಯವಸ್ಥೆ ಮಾಡುತ್ತಿದ್ದಳು. ಈ ರೀತಿ ಸುಮಾರು 1,500 ವಿವಾಹಗಳನ್ನು ಮಾಡಿಸಿದ್ದಾಳೆಂದು ಆಕೆಯ ವಿರುದ್ಧ ಹತ್ತು ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
A shocking human trafficking operation posing as a charitable NGO conducting mass weddings has been uncovered near Jaipur, Rajasthan.The NGO in question, operating under the name Gayatri Sarva Samaj Foundation, allegedly trafficked girls from economically weak families under the pretense of helping them get married.
12-04-25 11:09 pm
Bangalore Correspondent
Annapoorneshwari Nagar Police Inspector, A.V....
11-04-25 11:10 pm
Sameer MD, Vidoe Deleted, Dharmasthala: ಸೌಜನ್...
11-04-25 10:27 pm
Bangalore High court, Birthday, suspend: ಬೆಂಗ...
11-04-25 03:45 pm
Yatnal, Muslim, Prophet Muhammad Paigambar: ಪ...
11-04-25 03:28 pm
13-04-25 06:15 pm
HK News Desk
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
Indian Mujahideen, Yasin Bhatkal: ಹೈದರಾಬಾದ್ ಬ...
10-04-25 09:10 pm
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
13-04-25 05:20 pm
Mangalore Correspondent
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
Dinesh Gundurao, Mangalore: ಸರಕಾರಿ ಆಸ್ಪತ್ರೆಗಳ...
12-04-25 05:30 pm
12-04-25 10:52 pm
Mangalore Correspondent
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am