ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm