ಬ್ರೇಕಿಂಗ್ ನ್ಯೂಸ್
12-04-25 01:53 pm HK Staff ಕ್ರೈಂ
ಬೆಂಗಳೂರು, ಎ.12: ಸರ್ಕಾರಿ ಅಧಿಕಾರಿ ಸೋಗಿನಲ್ಲಿ 18 ಬಾರಿ ನ್ಯಾಯಾಲಯದ ಆದೇಶಗಳನ್ನೇ ನಕಲಿಯಾಗಿಸಿ ಬ್ಯಾಂಕ್ ನಿಂದ 1.32 ಕೋಟಿ ದೋಚಿದ್ದ ಉತ್ತರ ಭಾರತ ಮೂಲದ ಮೂವರು ವಂಚಕರನ್ನು ಬೆಂಗಳೂರು ನಗರ ಸೈಬರ್ ಕ್ರೈಂ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಹಲಸೂರು ಶಾಖೆಯ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಪೊಲೀಸರು, ದೆಹಲಿಯ ಅಭಿಮನ್ಯು ಕುಮಾರ್ ಪಾಂಡೆ, ನೀರಜ್ ಸಿಂಗ್ ಹಾಗೂ ರಾಜಸ್ಥಾನ ಮೂಲದ ಸಾಗರ್ ಲಾಕುರ್ ಎಂಬುವರನ್ನ ಬಂಧಿಸಿದ್ದಾರೆ. ಬಂಧಿತರ ಬ್ಯಾಂಕ್ ಖಾತೆಯಲ್ಲಿದ್ದ 63 ಲಕ್ಷ ರೂ. ಹಣವನ್ನ ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಪ್ರಮುಖ ಆರೋಪಿ ಸಾಗರ್, ರಾಜಸ್ಥಾನದ ಆಕ್ಸಿಸ್ ಬ್ಯಾಂಕ್ ಶಾಖೆಯೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ. ಇದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರಿಂದ ಬ್ಯಾಂಕ್ನಲ್ಲಿ ಪ್ರೀಜ್ ಆಗಿರುವ ಹಣವನ್ನ ಹೇಗೆ ಬಿಡಿಸಿಕೊಳ್ಳಬೇಕೆಂಬುದರ ಬಗ್ಗೆ ತಿಳಿದುಕೊಂಡಿದ್ದ. ಮತ್ತೊಂದೆಡೆ ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗಲ್ಲೂ ತೊಡಗಿದ್ದರಿಂದ ಅಲಹಾಬಾದ್ ಪೊಲೀಸರು ಈತನನ್ನು ಬಂಧಿಸಿದ್ದರು. ಜಾಮೀನಲ್ಲಿ ಹೊರಬಂದ ಸಾಗರ್, ಬೆಂಗಳೂರಿನ ಹಲಸೂರಿನ ಐಸಿಐಸಿಐ ಬ್ಯಾಂಕ್ನಲ್ಲಿ ಪ್ರೀಜ್ ಆಗಿದ್ದ 1.32 ಕೋಟಿ ರೂ. ಬಗ್ಗೆ ತಿಳಿದುಕೊಂಡಿದ್ದ. ಈ ಹಣ ಲಪಟಾಯಿಸಲು ಇನ್ನಿಬ್ಬರು ಸಹಚರರನ್ನು ಜೊತೆಯಾಗಿಸಿ ಸರ್ಕಾರಿ ಅಧಿಕಾರಿ ರೀತಿ ದಾಖಲಾತಿ ಸಿದ್ದಪಡಿಸಿ ಸರ್ಕಾರದ ಅಧೀನದಲ್ಲಿರುವ ಕೆ-ಸ್ವಾನ್ ಹೆಸರಲ್ಲಿ (ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್ ವರ್ಕ್) ಆನ್ಲೈನ್ ಮೂಲಕ ಮನವಿ ಸಲ್ಲಿಸಿ ಮೇಲ್ ಐಡಿ ಪಡೆದುಕೊಂಡಿದ್ದ.
18 ಬಾರಿ ನಕಲಿ ಕೋರ್ಟ್ ಆದೇಶ ;
ಬ್ಯಾಂಕಿನಲ್ಲಿ ಹಣ ಎಗರಿಸಲು ಸಿದ್ದತೆ ಮಾಡಿಕೊಂಡ ಬಳಿಕ ಬ್ಯಾಂಕ್ ಇಮೇಲ್ ಗೆ ನಕಲಿ ಆರ್ಡರ್ ಕಳುಹಿಸಿದ್ದ. ಫೆಬ್ರವರಿಯಿಂದ 18 ಬಾರಿ ನಕಲಿ ನ್ಯಾಯಾಲಯ ಆದೇಶಗಳನ್ನು ಕಳುಹಿಸಿದ್ದು ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ಫ್ರೀಜ್ ಆಗಿರುವ ಹಣವನ್ನ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಆದೇಶದಲ್ಲಿರುವ ಪೋನ್ ನಂಬರ್ ಮತ್ತು ಕರೆ ಮಾಡಿದ ವ್ಯಕ್ತಿಗಳ ಮೊಬೈಲ್ ನಂಬರ್ ಒಂದೇ ಇದ್ದುದರಿಂದ ನಿಜವೆಂದು ನಂಬಿ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಬ್ಯಾಂಕ್ ಅಧಿಕಾರಿಗಳು 1.32 ಕೋಟಿ ರೂ. ಕಳುಹಿಸಿದ್ದರು. ಬಳಿಕ ಅನುಮಾನಗೊಂಡು ಅಧಿಕಾರಿಗಳು ದೂರು ನೀಡಿದ್ದು, ಪ್ರಕರಣ ದಾಖಲಿಸಿದ ಇನ್ಸ್ಪೆಕ್ಟರ್ ಹಜರೇಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವಂಚಕರನ್ನ ಬಂಧಿಸಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ
38 ಲಕ್ಷ ಹಣದಲ್ಲಿ ಮೋಜು -ಮಸ್ತಿ ;
ಪ್ರಕರಣ ದಾಖಲಿಸಿದ ಸೈಬರ್ ಕ್ರೈಂ ಪೊಲೀಸರು, ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯನ್ನ ಪರಿಶೀಲಿಸಿದ್ದರು. ದೆಹಲಿ ಮೂಲದ ಅಭಿಮನ್ಯು ಎಂಬುವನನ್ನ ವಶಕ್ಕೆ ಪಡೆದು ವಿಚಾರಿಸಿದಾಗ ನೀರಜ್ ಪಾತ್ರದ ಬಗ್ಗೆ ಬಾಯ್ಬಿಟ್ಟಿದ್ದ. ಇಬ್ಬರನ್ನೂ ಬಂಧಿಸಿದಾಗ ನಕಲಿ ನ್ಯಾಯಾಲಯ ಆದೇಶ ಸೃಷ್ಟಿಸಿರುವುದು ಸಾಗರ್ ಎಂಬುದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದರು. ಅಲ್ಲದೇ ಆತನ ಖಾತೆಗೂ 38 ಲಕ್ಷ ರೂಪಾಯಿ ವರ್ಗಾಯಿಸಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದ.
ಆತನನ್ನು ಪತ್ತೆ ಮಾಡಿ ತನಿಖೆ ಮಾಡಿದಾಗ ಕ್ಯಾಸಿನೊ, ಪಬ್ಗಳಲ್ಲಿ ಮೋಜು - ಮಸ್ತಿ ಮಾಡಿ 38 ಲಕ್ಷ ಹಣ ಉಡೀಸ್ ಮಾಡಿರುವುದು ಗೊತ್ತಾಗಿದೆ. ಸದ್ಯ 63 ಲಕ್ಷ ರೂಪಾಯಿ ಹಣ ಸೀಜ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore police have arrested three people for swindling Rs 1.3 crore from an ICICI Bank branch in Halasuru by submitting 18 fake court orders.
01-01-26 05:18 pm
HK News Desk
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm