ಬ್ರೇಕಿಂಗ್ ನ್ಯೂಸ್
12-04-25 10:52 pm Mangalore Correspondent ಕ್ರೈಂ
ಮಂಗಳೂರು, ಎ.12 : ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಬೆಂಗಳೂರಿನಿಂದ ಖರೀದಿಸಿ ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 10 ಗ್ರಾಂ ಎಂಡಿಎಂಎ ಯನ್ನು ವಶಪಡಿಸಿದ್ದಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ಖಾಸಗಿ ಬಸ್ಸಿನಲ್ಲಿ ಪಾರ್ಸೆಲ್ ಮೂಲಕ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಇನ್ನೋವಾ ಕಾರಿನಲ್ಲಿ ಮುಕ್ಕ- ಮಾಲೆಮಾರ್ ಬೀಚ್ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎ.10 ರಂದು ದಾಳಿ ನಡೆಸಿದ್ದಾರೆ. ದೇರಳಕಟ್ಟೆ ಕಿನ್ಯಾ ನಿವಾಸಿ, ಕಾಟಿಪಳ್ಳದಲ್ಲಿ ವಾಸವಿದ್ದ ಮೊಹಮ್ಮದ್ ಆಸೀಫ್(24), ಮುಕ್ಕ ಸುರತ್ಕಲ್ ನಿವಾಸಿ ಅಸ್ಗರ್ ಆಲಿ(31), ಕೃಷ್ಣಾಪುರ 6ನೇ ಬ್ಲಾಕ್ ನಿವಾಸಿ ಮೊಹಮ್ಮದ್ ರಶೀಮ್(24) ಬಂಧಿತರು.

ರೂ. 1 ಲಕ್ಷ ಮೌಲ್ಯದ 10 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ನಗದು ಹಣ ರೂ. 4000/-, 4 ಮೊಬೈಲ್ ಫೋನ್ ಗಳು, KA-31-N-6311 ಟೊಯೊಟಾ ಇನ್ನೋವಾ ಕಾರು ಸಹಿತ ಒಟ್ಟು ರೂ. 9,24,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಬಸ್ ನಲ್ಲಿ ಪಾರ್ಸೆಲ್ ಮೂಲಕ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಸೀಫ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು 2 ಪ್ರಕರಣ ದಾಖಲಾಗಿರುತ್ತದೆ.
CCB police have arrested three drug peddlers who were selling the banned MDMA drug near Suratkal. Police seized 10 grams MDMA from the trio. Those arrested are Asif (24) from Krishnapura, Asgar Ali (31) of Mukka and Rasheem (24) of Haleyangady.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am