ಬ್ರೇಕಿಂಗ್ ನ್ಯೂಸ್
17-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.17 : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಕೊರಿಯರ್ ಮೂಲಕ ದೆಹಲಿಯಿಂದ ತರಿಸಿಕೊಂಡು ಮಂಗಳೂರು ನಗರದ ಲಾಲ್ ಬಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಎಂಡಿಎಂಎ ಡ್ರಗ್ಸ್ ಸಹಿತ ಆರೋಪಿಯನ್ನು ವಶಪಡಿಸಿದ್ದಾರೆ.
ದೆಹಲಿಯಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಕೊರಿಯರ್ ಮೂಲಕ ತರಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಮಣಿಕ್ಕರ- ಆಲಂತಡ್ಕ ನಿವಾಸಿ ಮೊಹಮ್ಮದ್ ಅಶ್ರಪ್ ಅಲಂತಡ್ಕ(50) ಬಂಧಿತ ಆರೋಪಿ.
ಆರೋಪಿ ವಶಕ್ಕೆ ಪಡೆದು ಆತನ ವಶದಿಂದ ರೂ. 1 ಲಕ್ಷ ಮೌಲ್ಯದ 11 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್-1, ಹೊಂಡಾ ಆಕ್ಟಿವಾ ಸ್ಕೂಟರ್ ಸಹಿತ ಒಟ್ಟು ರೂ. 1,60,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯು ದೆಹಲಿಯಿಂದ ತನ್ನ ಸ್ನೇಹಿತನ ಮೂಲಕ ಎಂಡಿಎಂಎ ಡ್ರಗ್ಸ್ ಖರೀದಿಸಿ ಅದನ್ನು ತನ್ನ ಊರಾದ ಸುಳ್ಯದ ವಿಳಾಸಕ್ಕೆ ಕೊರಿಯರ್ ಮೂಲಕ ತರಿಸಿಕೊಂಡು ಮಂಗಳೂರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಬಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು. ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ. ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂವಿ, ಶರಣಪ್ಪ ಭಂಡಾರಿ, ಎಎಸ್ಐ ಮೋಹನ್ ಕೆ.ವಿ, ರಾಮ ಹಾಗೂ ಸಿಸಿಬಿ ಸಿಬ್ಬಂದಿ ಕೈಗೊಂಡಿದ್ದರು.
Mangalore Sullia man arrested by CCB police over drug suply via courier. The arrested has been identified as Ashraf.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm