ಬ್ರೇಕಿಂಗ್ ನ್ಯೂಸ್
17-04-25 03:19 pm Mangalore Correspondent ಕ್ರೈಂ
ಉಳ್ಳಾಲ, ಎ.17 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿದ್ದು ಕುಡಿಯಲು ನೀರು ಕೇಳಿದ್ದಾಳೆ. ಯುವತಿಯ ಮೈಮೇಲೆ ತರಚಿದ ಗಾಯಗಳಾಗಿದ್ದು, ಗಾಬರಿಗೊಂಡ ಸ್ಥಳೀಯರು ಆಕೆಯನ್ನ ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಪೊಲೀಸರು ಆಕೆಯನ್ನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಈ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A native of West Bengal has alleged that she was gang-raped in Ullal, Mangalore. The victim, who was reportedly in a state of distress following the incident, was later admitted to a hospital in Derlakatte for medical treatment..
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm