ಬ್ರೇಕಿಂಗ್ ನ್ಯೂಸ್
17-04-25 03:19 pm Mangalore Correspondent ಕ್ರೈಂ
ಉಳ್ಳಾಲ, ಎ.17 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿದ್ದು ಕುಡಿಯಲು ನೀರು ಕೇಳಿದ್ದಾಳೆ. ಯುವತಿಯ ಮೈಮೇಲೆ ತರಚಿದ ಗಾಯಗಳಾಗಿದ್ದು, ಗಾಬರಿಗೊಂಡ ಸ್ಥಳೀಯರು ಆಕೆಯನ್ನ ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಪೊಲೀಸರು ಆಕೆಯನ್ನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಈ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A native of West Bengal has alleged that she was gang-raped in Ullal, Mangalore. The victim, who was reportedly in a state of distress following the incident, was later admitted to a hospital in Derlakatte for medical treatment..
01-01-26 05:18 pm
HK News Desk
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm