ಬ್ರೇಕಿಂಗ್ ನ್ಯೂಸ್
17-04-25 03:19 pm Mangalore Correspondent ಕ್ರೈಂ
ಉಳ್ಳಾಲ, ಎ.17 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿದ್ದು ಕುಡಿಯಲು ನೀರು ಕೇಳಿದ್ದಾಳೆ. ಯುವತಿಯ ಮೈಮೇಲೆ ತರಚಿದ ಗಾಯಗಳಾಗಿದ್ದು, ಗಾಬರಿಗೊಂಡ ಸ್ಥಳೀಯರು ಆಕೆಯನ್ನ ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಪೊಲೀಸರು ಆಕೆಯನ್ನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಈ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A native of West Bengal has alleged that she was gang-raped in Ullal, Mangalore. The victim, who was reportedly in a state of distress following the incident, was later admitted to a hospital in Derlakatte for medical treatment..
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm