ಬ್ರೇಕಿಂಗ್ ನ್ಯೂಸ್
18-04-25 03:41 pm Bangalore Correspondent ಕ್ರೈಂ
ಬೆಂಗಳೂರು, ಏ 18: ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿ ಬಳಿಕ ಮೃತ ನವಜಾತ ಶಿಶುವನ್ನು ಕಸದಲ್ಲಿ ಎಸೆದಿದ್ದ ಆರೋಪಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಭರತ್ (23) ಬಂಧಿತ ಆರೋಪಿ. ಈತ ಯಲಹಂಕ ನಿವಾಸಿ. ವೃತ್ತಿಯಲ್ಲಿ ಆಟೋ ಚಾಲಕ. ಎರಡು ವರ್ಷಗಳ ಹಿಂದೆ ಅಪ್ರಾಪ್ತೆಯೊಂದಿಗೆ ಸ್ನೇಹ ಬೆಳೆಸಿದ್ದ. ಈ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು. ಪ್ರೀತಿಯ ಸೋಗಿನಲ್ಲಿ ಅಪ್ರಾಪ್ತೆಯನ್ನು ಗರ್ಭವತಿ ಮಾಡಿದ್ದ. 9 ತಿಂಗಳ ಬಳಿಕ ಅಕ್ಕಪಕ್ಕದ ಮನೆಯವರೇ ಮಗುವನ್ನು ಡೆಲಿವರಿ ಮಾಡಿಸಿದ್ದರು. ಕಳೆದ 10 ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಹೆತ್ತ ಮಗುವನ್ನು ಕಸದೊಂದಿಗೆ ಹಾಕಿದ್ರು:
ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಅಪ್ರಾಪ್ತೆ ನವಜಾತ ಶಿಶುವನ್ನು ಕಸದ ಬ್ಯಾಗಿನಲ್ಲಿ ತುಂಬಿದ್ದಳು. ಇದಕ್ಕೆ ಆರೋಪಿ ಕುಮ್ಮಕ್ಕು ನೀಡಿದ್ದ. ಪಕ್ಕದ ಮನೆಯ ವ್ಯಕ್ತಿಗೆ ಕಸ ನೀಡಿ ಅದರ ಮೂಲಕ ಮಗುವನ್ನು ಹೊರಹಾಕುವಂತೆ ಸೂಚಿಸಿದ್ದಳು. ಮೃತ ಮಗುವಿರುವುದನ್ನು ಅರಿಯದ ವ್ಯಕ್ತಿ ಕಸ ತೆಗೆದುಕೊಂಡು ಹೋಗಿ ಖಾಸಗಿ ಆಸ್ಪತ್ರೆಯ ಬಳಿ ಖಾಲಿ ಜಾಗದಲ್ಲಿ ಹಾಕಿದ್ದ. ಕಸದಲ್ಲಿ ಮಗು ಪತ್ತೆಯಾಗುತ್ತಿದ್ದಂತೆ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ ವ್ಯಕ್ತಿಯೋರ್ವ ಸೈಕಲ್ನಲ್ಲಿ ಬಂದು ಕವರ್ನಲ್ಲಿ ಕಸ ಹಾಕಿರುವ ಬಗ್ಗೆ ಗುಮಾನಿ ವ್ಯಕ್ತಪಡಿಸಿದ್ದರು. ಆತನನ್ನು ಪತ್ತೆ ಹಚ್ಚಿ ಪ್ರಶ್ನಿಸಿದಾಗ, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಕದ ಮನೆಯವರು ಕಸ ಹಾಕುವುದಕ್ಕೆ ನೀಡಿದ್ದರು ಎಂದು ಹೇಳಿಕೆ ನೀಡಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಅಪ್ರಾಪ್ತೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
BBMP workers discover body of a newborn wrapped in a blanket in garbage at Yelahanka in Bangalore. According to police reports, the newborn was identified as the child of a local minor girl who reportedly gave birth with the assistance of neighbors. Preliminary investigations suggest that following the delivery, the infant was found lifeless and subsequently discarded in the garbage.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm