ಬ್ರೇಕಿಂಗ್ ನ್ಯೂಸ್
18-04-25 03:41 pm Bangalore Correspondent ಕ್ರೈಂ
ಬೆಂಗಳೂರು, ಏ 18: ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿ ಬಳಿಕ ಮೃತ ನವಜಾತ ಶಿಶುವನ್ನು ಕಸದಲ್ಲಿ ಎಸೆದಿದ್ದ ಆರೋಪಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಭರತ್ (23) ಬಂಧಿತ ಆರೋಪಿ. ಈತ ಯಲಹಂಕ ನಿವಾಸಿ. ವೃತ್ತಿಯಲ್ಲಿ ಆಟೋ ಚಾಲಕ. ಎರಡು ವರ್ಷಗಳ ಹಿಂದೆ ಅಪ್ರಾಪ್ತೆಯೊಂದಿಗೆ ಸ್ನೇಹ ಬೆಳೆಸಿದ್ದ. ಈ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು. ಪ್ರೀತಿಯ ಸೋಗಿನಲ್ಲಿ ಅಪ್ರಾಪ್ತೆಯನ್ನು ಗರ್ಭವತಿ ಮಾಡಿದ್ದ. 9 ತಿಂಗಳ ಬಳಿಕ ಅಕ್ಕಪಕ್ಕದ ಮನೆಯವರೇ ಮಗುವನ್ನು ಡೆಲಿವರಿ ಮಾಡಿಸಿದ್ದರು. ಕಳೆದ 10 ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಹೆತ್ತ ಮಗುವನ್ನು ಕಸದೊಂದಿಗೆ ಹಾಕಿದ್ರು:
ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಅಪ್ರಾಪ್ತೆ ನವಜಾತ ಶಿಶುವನ್ನು ಕಸದ ಬ್ಯಾಗಿನಲ್ಲಿ ತುಂಬಿದ್ದಳು. ಇದಕ್ಕೆ ಆರೋಪಿ ಕುಮ್ಮಕ್ಕು ನೀಡಿದ್ದ. ಪಕ್ಕದ ಮನೆಯ ವ್ಯಕ್ತಿಗೆ ಕಸ ನೀಡಿ ಅದರ ಮೂಲಕ ಮಗುವನ್ನು ಹೊರಹಾಕುವಂತೆ ಸೂಚಿಸಿದ್ದಳು. ಮೃತ ಮಗುವಿರುವುದನ್ನು ಅರಿಯದ ವ್ಯಕ್ತಿ ಕಸ ತೆಗೆದುಕೊಂಡು ಹೋಗಿ ಖಾಸಗಿ ಆಸ್ಪತ್ರೆಯ ಬಳಿ ಖಾಲಿ ಜಾಗದಲ್ಲಿ ಹಾಕಿದ್ದ. ಕಸದಲ್ಲಿ ಮಗು ಪತ್ತೆಯಾಗುತ್ತಿದ್ದಂತೆ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ ವ್ಯಕ್ತಿಯೋರ್ವ ಸೈಕಲ್ನಲ್ಲಿ ಬಂದು ಕವರ್ನಲ್ಲಿ ಕಸ ಹಾಕಿರುವ ಬಗ್ಗೆ ಗುಮಾನಿ ವ್ಯಕ್ತಪಡಿಸಿದ್ದರು. ಆತನನ್ನು ಪತ್ತೆ ಹಚ್ಚಿ ಪ್ರಶ್ನಿಸಿದಾಗ, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಕದ ಮನೆಯವರು ಕಸ ಹಾಕುವುದಕ್ಕೆ ನೀಡಿದ್ದರು ಎಂದು ಹೇಳಿಕೆ ನೀಡಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಅಪ್ರಾಪ್ತೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
BBMP workers discover body of a newborn wrapped in a blanket in garbage at Yelahanka in Bangalore. According to police reports, the newborn was identified as the child of a local minor girl who reportedly gave birth with the assistance of neighbors. Preliminary investigations suggest that following the delivery, the infant was found lifeless and subsequently discarded in the garbage.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm