ಬ್ರೇಕಿಂಗ್ ನ್ಯೂಸ್
18-04-25 10:59 pm Mangalore Correspondent ಕ್ರೈಂ
ಉಳ್ಳಾಲ, ಎ.18 : ಕುತ್ತಾರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಶುಕ್ರವಾರ ಸರಕಾರಿ ರಜಾದಿನದ ಕಾರಣ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಕೂಚ್ ಬೆಹರ್ ಜಿಲ್ಲೆಯ ಹತ್ತೊಂಭತ್ತು ವರುಷದ ಯುವತಿಯೋರ್ವಳಿಗೆ ಕೆಲಸ ಕೊಡಿಸುವ ಅಮಿಷವೊಡ್ಡಿ ,ಆಕೆಗೆ ಮದ್ಯ ಕುಡಿಸಿ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿಯ ನದಿ ತೀರದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪದಡಿ ಮೂವರು ಆರೋಪಿಗಳನ್ನ ಬಂಧಿಸಲಾಗಿತ್ತು.
ಆರೋಪಿಗಳಾದ ಆಟೋ ರಿಕ್ಷಾ ಚಾಲಕ ಮೂಲ್ಕಿ ಕಾರ್ನಾಡು ಲಿಂಗಪ್ಪಯ್ಯಕಾಡು ನಿವಾಸಿ ಪ್ರಭುರಾಜ್ (38), ಪೈಂಟರ್ ಕಮ್ ಎಲೆಕ್ಟ್ರೀಷಿಯನ್ ಕೆಲಸದ ಕುಂಪಲ ಚಿತ್ರಾಂಜಲಿ ನಗರ ನಿವಾಸಿ ಮಿಥುನ್ (37), ಡೆಲಿವರಿ ಬಾಯ್ ಆಗಿರುವ ಪಡೀಲ್ ಕೊಡಕ್ಕಲ್ ನಿವಾಸಿ ಮನೀಶ್ (30) ಎಂಬವರನ್ನು ಶುಕ್ರವಾರ ಉಳ್ಳಾಲ ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ.
ಉಳ್ಳಾಲ ಪೊಲೀಸರು ಕಸ್ಟಡಿಯಲ್ಲಿರುವ ಆರೋಪಿಗಳನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಹೆಚ್ಚಿನ ವಿಚಾರಣೆ ನಡೆಸಿ ಶನಿವಾರ ಸ್ಥಳ ಮಹಜರು ನಡೆಸುವ ಸಾಧ್ಯತೆಗಳಿವೆ. ಸಂತ್ರಸ್ತ ಪಶ್ಚಿಮ ಬಂಗಾಳ ಮೂಲದ ಯುವತಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ವೈದ್ಯಕೀಯ ವರದಿ ಬಂದ ನಂತರವೇ ಅತ್ಯಾಚಾರ ಕೃತ್ಯ ಸಾಬೀತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಕುಂಪಲ ನಿವಾಸಿ ಮಿಥುನ್ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣವೊಂದಿದ್ದರೆ, ಹೆಣ್ಣು ಪೀಡನೆ ಸಂಬಂಧಿತ ಪ್ರಕರಣಗಳಲ್ಲಿ ಹಲವು ಬಾರಿ ಉಳ್ಳಾಲ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದನೆನ್ನಲಾಗಿದೆ.
ಗೂಗಲ್ ಪೇಯಿಂದ ಸಿಕ್ಕಿಬಿದ್ದ ಆರೋಪಿಗಳು
ಕೇರಳದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಂತ್ರಸ್ತ ಯುವತಿ ತನ್ನ ಪ್ರಿಯಕರನೊಂದಿಗೆ ಗಲಾಟೆ ಮಾಡಿ ಬುಧವಾರ ಕೆಲಸ ಅರಸಿ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದಳು. ರೈಲ್ವೇ ನಿಲ್ದಾಣದಲ್ಲಿ ಸಂತ್ರಸ್ತೆಯ ಸ್ನೇಹ ಸಂಪಾದಿಸಿದ ಆರೋಪಿ ರಿಕ್ಷಾ ಚಾಲಕ ಪ್ರಭುರಾಜ್ ಆಕೆಯ ಮೊಬೈಲ್ ರಿಪೇರಿ ಮಾಡಿಸಿದ್ದ. ಯುವತಿ ಈ ವೇಳೆ ಪಶ್ಚಿಮ ಬಂಗಾಳದಲ್ಲಿರುವ ತನ್ನ ಸಹೋದರಿಗೆ ಕರೆ ಮಾಡಿದ್ದಳು. ಯುವತಿಯ ಮೊಬೈಲಲ್ಲಿ ಗೂಗಲ್ ಪೇ ಆ್ಯಪ್ ಇಲ್ಲದ ಕಾರಣ ಪಶ್ಚಿಮ ಬಂಗಾಳದ ಸಹೋದರಿಯು ಆರೋಪಿ ರಿಕ್ಷಾ ಚಾಲಕನ ಗೂಗಲ್ ಪೇ ಖಾತೆಗೆ 2000 ರೂಪಾಯಿ ಕಳಿಸಿ, ತನ್ನ ಸೋದರಿಯನ್ನ ಪಶ್ಚಿಮ ಬಂಗಾಳದ ರೈಲು ಹತ್ತಿಸುವಂತೆ ಕೋರಿದ್ದರು. ಆದರೆ ಪ್ರಭುರಾಜ್ ಯುವತಿಗೆ ರೊಟ್ಟಿ ಕಂಪನಿಯೊಂದರಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ತನ್ನ ಸ್ನೇಹಿತರ ಜೊತೆ ಸೇರಿ ಯುವತಿಯನ್ನ ದುರ್ಬಳಕೆ ಮಾಡಿದ್ದ. ಗೂಗಲ್ ಪೇ ನಂಬರಿನ ಜಾಡು ಹಿಡಿದ ಪೊಲೀಸರು ಮೂವರು ಆರೋಪಿಗಳನ್ನು ಸುಲಭದಲ್ಲಿ ಹೆಡೆಮುರಿ ಕಟ್ಟಿದ್ದಾರೆ.
The Mangalore police successfully apprehended the suspects involved in the recent gang rape incident in Ullal. The Mangaluru City police on Thursday, April 17, arrested three persons who are suspected to have gang raped a 20-year-old woman hailing from West Bengal.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm