ಬ್ರೇಕಿಂಗ್ ನ್ಯೂಸ್
24-04-25 12:58 pm Mangaluru Correspondent ಕ್ರೈಂ
ಉಳ್ಳಾಲ, ಎ.24: ಸರಕಾರಿ ನಗರ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ನಿರ್ವಾಹಕನ ವೀಡಿಯೋ ವೈರಲ್ ಆಗಿದ್ದು ಕೂಡಲೇ ಕಾರ್ಯ ಪೃವೃತ್ತರಾದ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರು-ಮುಡಿಪು ನಡುವೆ ಸಂಚರಿಸುವ ಸರಕಾರಿ ನಗರ ಸಾರಿಗೆ ಬಸ್ಸಿನ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್ ಎಂಬಾತನನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸ್ಸಿನ ಸೀಟಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವತಿಯೋರ್ವಳು ಗಾಢ ನಿದ್ದೆಗೆ ಜಾರಿದ್ದು ಈ ವೇಳೆ ಬಸ್ಸು ನಿರ್ವಾಹಕ ಪ್ರದೀಪ್ ಯುವತಿಯ ಎದೆಯ ಭಾಗವನ್ನ ಸವರಿ ಲೈಂಗಿಕ ಕಿರುಕುಳ ನೀಡುತ್ತಿರುವ ಕುಕೃತ್ಯವನ್ನ ಸಹ ಪ್ರಯಾಣಿಕರೋರ್ವರು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಘಟನೆಯು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಜಪ್ಪಿನ ಮುಗೇರು ಪ್ರದೇಶದಲ್ಲಿ ನಿನ್ನೆ ನಡೆದಿದೆಯೆಂದು ಹೇಳಲಾಗಿದೆ.ಸರಕಾರಿ ಬಸ್ಸು ನಿರ್ವಾಹಕನ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಚಲಿಸುವ ಬಸ್ಸಿನಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ವಿರುದ್ಧ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
Sexual harassment involving a government transport bus conductor has garnered widespread attention after a video of his lewd behavior went viral on social media. The conductor, identified as Pradeep, was arrested by local police following public outcry over the incident.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
24-04-25 01:58 pm
HK News Desk
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm