ಬ್ರೇಕಿಂಗ್ ನ್ಯೂಸ್
28-04-25 11:24 am Mangalore Correspondent ಕ್ರೈಂ
ಉಳ್ಳಾಲ,ಎ.28 : ಬೈಕ್ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ- ಕೇರಳ ಗಡಿಭಾಗ ಬಾಕ್ರಬೈಲ್ ತಿರುವಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (22) ಎಂಬ ಯುವಕ ಶೂಟೌಟ್ ಒಳಗಾದವರು.
ನಿನ್ನೆ ರಾತ್ರಿ ಬೈ ಕ್ ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಬಾಕ್ರಬೈಲ್ ತಿರುವಿನ ಸೂರ್ಯೇಶ್ವರ ದ್ವಾರದ ಬಳಿ ಶೂಟೌಟ್ ನಡೆದಿದೆ. ಕಾಲಿಗೆ ಗಂಭೀರ ಗಾಯಗೊಂಡ ಸವಾದ್ ನನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚೇತರಿಸಿಕೊಂಡಿದ್ದಾರೆ. ಪ್ರಾಣಿ ಬೇಟೆಗೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇರುವುದಾಗಿ ಮಂಜೇಶ್ವರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.


ಇನ್ನೊಂದು ಮೂಲದ ಪ್ರಕಾರ ಗಾಂಜಾ ವ್ಯಸನಿಗಳು ಅಥವಾ ವ್ಯಾಪಾರಿಗಳು ಕೃತ್ಯ ಎಸಗಿರುವ ಸಾಧ್ಯತೆ ವ್ಯಕ್ತವಾಗಿದೆ. ಬೈಕ್ನಲ್ಲಿ ತೆರಳುವ ಸಂದರ್ಭ ನಿರ್ಜನ ಗುಡ್ಡದಲ್ಲಿ ವಾಹನದ ಹೆಡ್ಲೈಟ್ ಕಾಣಿಸಿದ್ದು., ಅದನ್ನು ಗಮನಿಸಿ ಸವಾದ್ ಬೈಕ್ ನಿಲ್ಲಿಸಿದ ಕಾರಣಕ್ಕೆ ಶೂಟೌಟ್ ನಡೆದಿದೆ ಅನ್ನುವ ಮಾತುಗಳು ಕೇಳಿಬಂದಿದೆ. ಘಟನೆ ನಡೆದ ಬಾಕ್ರಬೈಲ್ ಪ್ರದೇಶ ಕೇರಳಕ್ಕೆ ಸೇರಿದ್ದು ಮಂಜೇಶ್ವರ ಠಾಣಾ ಪೋಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ನಡೆಸುತ್ತಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
In a shocking incident near Bakrebail, Mangalore, an arecanut trader named Savad sustained a bullet injury to his leg while traveling on a bike. Savad was immediately rushed to a hospital in Deralakatte, where he is currently receiving treatment. His condition is reported to be stable.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm